ಪ್ರತ್ಯೇಕ ಎನ್ ಕೌಂಟರ್ : 8 ಜನ ಉಗ್ರರ ಹೆಡೆಮುರಿ ಕಟ್ಟಿದ ಸೇನೆ!!

ಶ್ರೀನಗರ :

     ದಕ್ಷಿಣ ಕಾಶ್ಮೀರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಎಂಟು ಉಗ್ರರನ್ನು ಗುಂಡಿಕ್ಕಿ ಕೊಂದಿದ್ದಾರೆ.

      ಗುರುವಾರ ರಾತ್ರಿಯಿಂದಲೂ ಪಂಪೋರ್ ಮತ್ತು ಶೋಪಿಯಾನ್‌ನಲ್ಲಿ ಜಂಟಿ ಕಾರ್ಯಾಚರಣೆ ಮುಂದುವರೆದಿದೆ.

     ನಿನ್ನೆ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಪಾಂಪೋರ್ ಪ್ರದೇಶದ ಮೀಜ್​​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಆತನ ಹತ್ಯೆ ಬಳಿಕ ಮತ್ತಿಬ್ಬರು ಉಗ್ರರು ಸ್ಥಳೀಯ ಜಾಮಿಯಾ ಮಸೀದಿಗೆ ಪ್ರವೇಶಿಸಿದ್ದು, ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭವಾಯಿತು. ಮಸೀದಿಯೊಳಗೆ ಅಡಗಿಕೊಂಡಿದ್ದ ಅವರನ್ನು ಹೊಡೆದುರುಳಿಸಲಾಗಿದೆ. ಈ ಮೂಲಕ ಪಾಂಪೋರ್​ನ ಮೀಜ್​ನಲ್ಲಿ ಸೆರೆಸಿಕ್ಕ ಮೂವರು ಉಗ್ರರನ್ನೂ ಹತ್ಯೆ ಮಾಡಿದಂತಾಗಿದೆ. ಇನ್ನು ಶೋಪಿಯಾನ್​ ಜಿಲ್ಲೆಯ ಮುನಾಂದ್​ ಪ್ರದೇಶದಲ್ಲಿ ಐವರು ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಜಮ್ಮು-ಕಾಶ್ಮೀರ ಡಿಜಿಪಿ ದಿಲ್ಬಾಗ್​ ಸಿಂಗ್​ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap