ನವದೆಹಲಿ:
ಪುಲ್ವಾಮಾ ಉಗ್ರ ದಾಳಿಯ ನಂತರ ಪಾಕ್ ಮತ್ತು ಭಾರತದ ಗಡಿಯಲ್ಲಿ ಉಂಟಾಗಿದ್ದ ಯುದ್ಧ ಭೀತಿಯ ಸಂದರ್ಭದಲ್ಲಿ ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಸಾಹಸ ಮೆರೆದಿದ್ದ ಪೈಲಟ್ ಅಭಿನಂದನ್ ವರ್ಧಮಾನ್ರಿಗೆ ಮಿಲಿಟರಿ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ವರ್ಧಮಾನ್ ಅವರಿಗೆ ವೀರಚಕ್ರ ಹಾಗೂ ಐದು ಮಂದಿ ಮಿರಾಜ್-2000 ಯುದ್ಧವಿಮಾನ ಪೈಲಟ್ಗಳಿಗೆ ವಾಯುಸೇನಾ ಶೌರ್ಯಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಇಬ್ಬರು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಶತ್ರು ರಾಷ್ಟ್ರದ ಬಲಿಷ್ಠ ಯುದ್ಧ ವಿಮಾನ ನೆಲಕ್ಕುರುಳಿಸಿ ನಂತರದಲ್ಲಿ ಆ ರಾಷ್ಟ್ರಕ್ಕೆ ಅಚಾನಕ್ಕಾಗಿ ಪ್ರವೇಶಿಸಿ ಅಲ್ಲಿ ಕೆಲ ದಿನ ಬಂಧಿಯಾಗಿದ್ದರು. ಆದರೂ ಭಾರತದ ಯಾವುದೇ ರಹಸ್ಯ ಮಾಹಿತಿಯನ್ನು ಬಿಟ್ಟುಕೊಡದೆ ದಿಟ್ಟತನ ಮೆರೆದಿದ್ದರು. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಅಭಿನಂದನ್ಗೆ ವೀರ ಚಕ್ರ ನೀಡಿ ಗೌರವಿಸಲು ಮುಂದಾಗಿದೆ.
ಮಿಲಿಟರಿ ಗೌರವದಲ್ಲಿ ವೀರ ಚಕ್ರ ಮೂರನೇ ಅತ್ಯುನ್ನತ ಗೌರವವಾಗಿದ್ದು, ಪರಮ ವೀರ ಚಕ್ರ ಹಾಗೂ ಮಹಾ ವೀರ ಚಕ್ರ ಮೊದಲೆರಡು ಅತ್ಯುನ್ನತ ಗೌರವಗಳಾಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
