ಪಾಕ್‌ ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಹುತಾತ್ಮ!!

ಜಮ್ಮು : 

      ಉಗ್ರರು ಹಾಗೂ ಭದ್ರತಾ ಸಿಬ್ಬಂದಿಯ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿ(ಎಸ್‍ಪಿಓ) ಹುತಾತ್ಮರಾಗಿದ್ದಾರೆ.

      ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮ ಉಲ್ಲಂಘಿಸಿದ್ದು, ಮಂಗಳವಾರವೂ ಈ ಗುಂಡಿನ ದಾಳಿ ಮುಂದುವರಿಸಿದೆ. ಗುಂಡಿನ ಚಕಮಕಿಯಲ್ಲಿ ಭಾರತದ ಪೊಲೀಸ್ ಅಧಿಕಾರಿ(ಎಸ್‍ಪಿಓ) ಹುತಾತ್ಮರಾಗಿದ್ದು, ನಾಲ್ವರು ಯೋಧರು ಗಾಯಗೊಂಡಿದ್ದಾರೆ. 

     ಹುತಾತ್ಮರಾದ ಎಸ್‍ಪಿಓ ಅವರನ್ನು ಬಿಲ್ಲಾಲ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸಬ್ ಇನ್ಸ್ ಪೆಕ್ಟರ್ ಅಮರ್‍ದೀಪ್ ಪರಿಹಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

      ಗುಂಡಿನ ಚಕಮಕಿ ಪೂರ್ಣಗೊಂಡಿದ್ದು, ಒಬ್ಬ ಉಗ್ರ ಹತನಾಗಿದ್ದಾನೆ. ಈತನ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ. ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

      ಮೆಂದರ್‌ ಮತ್ತು ಕೃಷ್ಣಘಾಟಿ ವಿಭಾಗದಲ್ಲೂ ನಾಗರಿಕರು ಮತ್ತು ಸೇನೆಯ ಗಡಿ ಠಾಣೆಗಳನ್ನು ಗುರಿಯಾಗಿಸಿ ಪಾಕ್‌ ದಾಳಿ ನಡೆಸಿದೆ. ಭಾರತದ ಯೋಧರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link