ಚೆನ್ನೈ:
ನಿವಾರ್, ಬುರೆವಿ ಬಳಿಕ ಇದೀಗ ತಮಿಳುನಾಡಿಗೆ ಅರ್ನಬ್ ಚಂಡಮಾರುತದ ಭೀತಿ ಎದುರಾಗಿದೆ.
ಹಿಂದೂಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದಾಗಿ ಅರ್ನಬ್ ಚಂಡಮಾರುತ ಎದ್ದಿದ್ದು, ಇದಾಗಲೇ ಕೇರಳ ಪ್ರವೇಶಿಸಲು ಸಿದ್ಧವಾಗಿರುವ ಚಂಡಮಾರುತ ಕೆಲವೇ ದಿನಗಳಲ್ಲಿ ತಮಿಳುನಾಡು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ತಮಿಳುನಾಡಿನಲ್ಲಿ ಭೀಕರ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಮೇಲೂ ಇದು ಪರಿಣಾಮ ಬೀರಲಿದೆ ಎನ್ನಲಾಗಿದೆ.
ಒಂದರ ಹಿಂದೆ ಒಂದರಂತೆ ತಮಿಳುನಾಡು, ಕೇರಳ, ಆಂಧ್ರಪ್ರದೇಶಗಳಿಗೆ ಈ ತಿಂಗಳಲ್ಲಿ ಚಂಡಮಾರುತ ಅಪ್ಪಳಿಸುತ್ತಲೇ ಇವೆ. ಇದೀಗ ನಿವಾರ್ ಹಾಗೂ ಬುರೇವಿಯ ಚಂಡಮಾರುತಗಳಿಂದ ಚೇತರಿಸಿಕೊಳ್ಳುತ್ತಿದ್ದ ರಾಜ್ಯಗಳಿಗೆ ಅರ್ನಬ್ ಶಾಕ್ ಕೊಡಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/12/Storm.jpg)