ನವದೆಹಲಿ:
ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿರುವ ಡಿ.ಕೆ.ಶಿವಕುಮಾರ್ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ.
ಇಂದು ಸಂಸದ ಹಾಗೂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರಿಗೆ ಕರೆ ಮಾಡಿ ಸುಮಾರು 3 ನಿಮಿಷಗಳ ಕಾಲ ಮಾತನಾಡಿದ ಸೋನಿಯಾ ಗಾಂಧಿ ಅವರು ‘ಬಿಜೆಪಿ ವಿರೋಧ ಪಕ್ಷಗಳ ನಾಯಕರನ್ನು ಮಟ್ಟಹಾಕಲು ದ್ವೇಷದ ರಾಜಕಾರಣ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ. ಈ ಸಮಯದಲ್ಲಿ ನಾವೆಲ್ಲರು ಅವರ ಜತೆ ಇದ್ದೇವೆ’ ಎಂದು ಸುರೇಶ್ ಅವರಿಗೆ ಹೇಳಿದ್ದಾರೆ.
ಅಲ್ಲದೇ ಡಿ.ಕೆ. ಶಿವಕುಮಾರ್ ಅವರ ಬಗ್ಗೆಯೂ ವಿಚಾರಿಸಿರುವ ಸೋನಿಯಾ ಗಾಂಧಿ, ಡಿಕೆ ಶಿವಕುಮಾರ್ ಅವರ ಆರೋಗ್ಯ ಹೇಗಿದೆ. ಅವರ ಮಾನಸಿಕ ಸ್ಥಿತಿ ಹೇಗಿದೆ ಎಂದು ವಿಚಾರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/sonia_gandhi_3.gif)