ನವದೆಹಲಿ:
ಪುಲ್ವಾಮಾ ದಾಳಿಗೆ ಪ್ರತೀಕಾರ ತೆಗೆದುಕೊಳ್ಳಲು ಪಾಕಿಸ್ತಾನ ಉಗ್ರ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ವೈಮಾನಿಕ ದಾಳಿ ನಡೆಸಿ ಯಶಸ್ವಿಯಾಗಿದೆ.
ಈ ದಾಳಿ ಸಂಬಂಧ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಂಗಳವಾರ ಸಂಜೆ 5 ಗಂಟೆಗೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ಇದೇ ವೇಳೆ ಸರ್ಕಾರ, ಎಲ್ಲ ಪಕ್ಷಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಾಚರಣೆ ನಡೆಸುವ ಸಾಧ್ಯತೆಗಳಿವೆ.
ಇಂದಿನ ಸರ್ವ ಪಕ್ಷ ಸಭೆಯಲ್ಲಿ ಸಂಭಾವ್ಯ ದಾಳಿ ಹಾಗೂ ಉಗ್ರರ ದಮನಕ್ಕೆ ಬೇಕಾದ ಕ್ರಮಗಳು, ಸರ್ಕಾರದ ಮುಂದಿನ ನಡೆ, ಪಾಕ್ ಯುದ್ಧ ಘೋಷಣೆ ಮಾಡಿದರೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಹತ್ವದ ಸಮಾಲೋಚನೆ ಹಾಗೂ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/02/Untitled-1-11.jpg)