ಬಿಜೆಪಿ ಕಾರ್ಯಕರ್ತನನ್ನ ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು : ಅಮೇಠಿ

ಅಮೇಠಿ: 

   ಸ್ಮೃತಿ ಇರಾನಿ ಪರ ಭರ್ಜರಿ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತನನ್ನ ಗುಂಡಿಟ್ಟು ಹತ್ಯೆ ಮಾಡಲಾಗಿದೆ.ಬಾರೂಲಿಯಾ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಸುರೇಂದ್ರ ಸಿಂಗ್​ ಹತ್ಯೆಯಾದ ವ್ಯಕ್ತಿ. ನಿನ್ನೆಯಷ್ಟೆ ಸ್ಮೃತಿ ಇರಾನಿ ಅವರ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಬಂದು ರಾತ್ರಿ ಮನೆ ಹೊರಗಡೆ ಮಲಗಿದ್ದರು.

  ಬೆಳಗಿನ ಜಾವ ಬಂದ ದುಷ್ಕರ್ಮಿಗಳು ಸುರೇಂದ್ರ ಸಿಂಗ್​ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಈಗಾಗಲೆ ಕೆಲವು ಶಂಕಿತರನ್ನ ವಶಕ್ಕೆ ಪಡೆದಿದ್ದು, ಹಳೆ ದ್ವೇಷ ಅಥವಾ ರಾಜಕೀಯ ದ್ವೇಷಕ್ಕಾಗಿ ಹತ್ಯೆ ನಡೆದಿರಬಹುದು ಎಂದು ಅಮೇಠಿ ಎಸ್​ಪಿ, ರಾಜೇಶ್​ ಕುಮಾರ್​ ತಿಳಿಸಿದ್ದಾರೆ.

ಆದ್ರೆ ಸ್ಥಳಿಯರು ಹೇಳುಪ ಪ್ರಕಾರ ಸುರೇಂದ್ರ ಸಿಂಗ್ ಸ್ಮೃತಿ ಇರಾನಿ ಬೆಂಬಲಿಗಿಗನಾಗಿದ್ದು, ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ್ದರು.  ರಾಜಕೀಯ ಕಾರಣದಿಂದಲೇ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.   ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ವಿರುದ್ಧ ಸ್ಪರ್ಧೆ ಮಾಡಿದ್ದ ಕೇಂದ್ರ ಸಚಿವೆ ಸೃತಿ ಇರಾನಿ ರಾಹುಲ್​ ಗಾಂಧಿಯನ್ನ ಸೋಲಿಸಿ ಭರ್ಜರಿ ಜಯಗಳಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap