ಕೇರಳ:
ಕೆಲವು ದಿನಗಳ ಹಿಂದೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೇರಳದ ಪ್ರಸಿದ್ಧ ಕ್ಷೇತ್ರ ಶಬರಿಮಲೈಯಲ್ಲಿ ಕಾಣಿಸಿಕೊಂಡಿದ್ದಾರೆ.
ಹೌದು ಖಾಕಿಗೆ ವಿದಾಯ ಹೇಳಿರುವ ಅಣ್ಣಾಮಲೈ ಅವರು ಕಪ್ಪು ಲುಂಗಿ ತೊಟ್ಟು, ಹೆಗಲಿಗೊಂದು ಕಪ್ಪು ಶಾಲು ಹಾಕಿ 18 ಮೆಟ್ಟಿಲೇರಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ್ದಾರೆ.
ಇನ್ನು ಖಡಕ್ ಆಫೀಸರ್ ಅಣ್ಣಾಮಲೈಯನ್ನು ನೋಡಿದ ಭಕ್ತರು ಅವರೊಂದಿಗೆ ಸೆಲ್ಪಿಗೆ ಮುಗಿಬಿದ್ದಿದ್ದು, ಸೆಲ್ಪಿ ತೆಗೆಸಿಕೊಂಡು ಸಂಭ್ರಮಿಸಿದರು. ಪೋಟೊಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
