ಅರ್ನಬ್​ ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ!!

ನವದೆಹಲಿ :

     ಸುಪ್ರೀಂ ಕೋರ್ಟ್ ನ್ಯಾಯಪೀಠವು ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿಯವರಿಗೆ ಜಾಮೀನು ನೀಡಿದೆ.

     ಬಾಂಬೆ ಹೈಕೋರ್ಟ್ ನಲ್ಲಿ 2018ರಲ್ಲಿ ನಡೆದಂತ  ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿಯವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಜಾಮೀನು ಅರ್ಜಿಯನ್ನು ನಿರಾಕರಿಸಿದ್ದರಿಂದ ಸುಪ್ರೀಂ ಕೋರ್ಟ್ ಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿಯವಿಗೆ ಜಾಮೀನು ನೀಡಿದೆ.

     ಇಂಟೀರಿಯರ್ ಡಿಸೈನರ್‌ನನ್ನು ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದ ಮೇಲೆ ರಾಯಗಡ್ ಪೊಲೀಸರು ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನವೆಂಬರ್ 14 ರಂದು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap