ದೆಹಲಿ :
ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ 21 ಸದಸ್ಯರ ರಕ್ಷಣಾ ಸಚಿವಾಲಯದ ಸಂಸದೀಯ ಸಲಹಾ ಸಮಿತಿಯಿಂದ ಗುರುವಾರ ಕೈಬಿಡಲಾಗಿದೆ.
ಮಹಾತ್ಮ ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೊಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡಿ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಸಂಸದೆ ಪ್ರಗ್ಯಾ ಠಾಕೂರ್ ಈಗ ಬಿಜೆಪಿಯಿಂದಲೂ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಇದೀಗ ಪ್ರಗ್ಯಾ ಠಾಕೂರ್ ಹೇಳಿಕೆಗೆ ಬಿಜೆಪಿ ಮುಖಂಡರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎರಡು ಪ್ರಮುಖ ಸಮಿತಿಗಳಿಂದ ಕೈಬಿಡಲಾಗಿದೆ.
#WATCH BJP Working President JP Nadda: Pragya Thakur's statement (referring to Nathuram Godse as 'deshbhakt') yesterday in the parliament is condemnable. She will be removed from the consultative committee of defence. pic.twitter.com/hHO9ocihdf
— ANI (@ANI) November 28, 2019
ಎರಡು ದಿನಗಳ ಹಿಂದೆಯಷ್ಟೇ ರಕ್ಷಣಾ ಸಚಿವಾಲಯದ ಸಮಿತಿಗೆ ಸೇರ್ಪಡೆಯಾಗಿದ್ದ ಪ್ರಗ್ಯಾ ಠಾಕೂರ್ ಅವರನ್ನು ಸಮಿತಿಯಿಂದ ಕೈಬಿಡಲಾಗಿದೆ. ಅಲ್ಲದೇ ಸಂಸದೀಯ ಕಲಾಪ ಸಮಿತಿಯಿಂದಲೂ ಪ್ರಗ್ಯಾ ಅವರನ್ನು ಕೇಂದ್ರ ಸರಕಾರ ಕೊಕ್ ನೀಡಿದೆ.
ಲೋಕಸಭೆ ಅಧಿವೇಶದನಲ್ಲಿ ಗೊಡ್ಸೆ ದೇಶಭಕ್ತ ಎಂದು ಹೇಳಿಕೆ ನೀಡಿದ್ದನ್ನು ಪ್ರತಿಪಕ್ಷಗಳು ಖಂಡಿಸಿದ್ದವು. ಅಲ್ಲದೇ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅವರು ಗೋಡ್ಸೆ ದೇಶಭಕ್ತ ಎಂಬ ಪದವನ್ನು ಕಡತದಿಂದ ಕಿತ್ತು ಹಾಕಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/sadhvi-pragya-thakur_52c6f7.gif)