ನವದೆಹಲಿ :
ಗೋಡ್ಸೆ ಒಬ್ಬ ದೇಶ ಭಕ್ತ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಠಾಕೂರ್ ಈ ಕುರಿತು ಸಂಸತ್ ಅಧಿವೇಶನದಲ್ಲಿ ಇಂದು ಕ್ಷಮೆಯಾಚಿಸಿದ್ದಾರೆ.
ಇಂದು ಸದನದಲ್ಲಿ ಕಲಾಪ ವೇಳೆ ಮಾತನಾಡಿದ ಅವರು, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆದರೆ ನನ್ನ ಹೇಳಿಕೆಯನ್ನು ತಿರುಚಿ ಮತ್ತೊಂದು ರೀತಿಯಲ್ಲಿ ಬಿಂಬಿಸಲಾಗಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ತಪ್ಪಾಗಿ ವಿಶ್ಲೇಷಿಸಲಾಗಿದೆ ಎಂದು ಕೂಡ ಇದೇ ಸಂದರ್ಭದಲ್ಲಿ ಹೇಳಲು ಇಚ್ಛಿಸುತ್ತೇನೆ. ಇದು ಖಂಡನೀಯ ಎಂದರು.
ನ್ಯಾಯಾಲಯದಲ್ಲಿ ನನ್ನ ವಿರುದ್ಧ ಮಾಡಿದ ಯಾವುದೇ ಆರೋಪಗಳು ಸಾಬೀತಾಗಿಲ್ಲ. ಯಾವುದೇ ಸಾಕ್ಷಿ ಆಧಾರವಿಲ್ಲದೇ ನನ್ನನ್ನು ಭಯೋತ್ಪಾದಕಿ ಎಂದು ಕರೆಯುವುದು ಕಾನೂನಿಗೆ ವಿರುದ್ಧವಾಗಿದ್ದು ಹಾಗೂ ನನನ್ನು ಅವಮಾನ ಮಾಡುವ ಪ್ರಯತ್ನ ಎಂದು ಹರಿಹಾಯ್ದರು. ಈ ವೇಳೆ ಸದನದಲ್ಲಿ ಮತ್ತಷ್ಟು ಗದ್ದಲ ಕೇಳಿಬಂತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/Pragya-Thakur_2019.gif)