ಗಾಂಧಿನಗರ:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅಡ್ವಾಣಿ ಅವರ ಸ್ವ ಕ್ಷೇತ್ರ ಈ ಗಾಂಧಿನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.
ರಾಜ್ಯ ಸಭಾ ಸದಸ್ಯರಾಗಿರುವ ಅಮಿತ್ ಶಾ ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ನಡೆಸಿ ನಂತರ ಅಹಮದಬಾದ್ನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಸಲಿದ್ದಾರೆ.
Ahmedabad: BJP President Amit Shah pays tribute to Sardar Vallabhbhai Patel, he will file his nomination for Gandhinagar parliamentary constituency today. #Gujarat pic.twitter.com/HL1a0fupMx
— ANI (@ANI) March 30, 2019
ಸಮಾವೇಶದಲ್ಲಿ ಶಿವಸೇನಾ, ಶಿರೋಮಣಿ ಅಕಾಲಿ ದಳ, ಲೋಕ ಜನಶಕ್ತಿ ಸೇರಿದಂತೆ ಎನ್ಡಿಎ ಮೈತ್ರಿ ಪಕ್ಷಗಳ ನಾಯಕರು, ಕೇಂದ್ರ ಸಚಿವ ರಾಜನಾಥ್ ಸಿಂಗ್ ಹಾಜರಾಗಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರೂ ಆಗಮಿಸಲಿದ್ದಾರೆ.
ಈ ವೇಳೆ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಹುಕಾಲದವರಗೆ ಎಲ್ಕೆ ಅಡ್ವಾಣಿಯವರು ಪ್ರತಿನಿಧಿಸಿದ್ದ ಗಾಂಧಿನಗರ ಲೋಕಸಭಾ ಕ್ಷೇತ್ರದ ರಾಜಕೀಯ ಹೊಣೆಗಾರಿಕೆಯನ್ನು ಅಮಿತ್ ಶಾ ವಹಿಸಿಕೊಂಡಿದ್ದಾರೆ ಎಂದು ವ್ಯಾಖ್ಯಾನಿಸಿದರು.
ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರು ಆರು ಬಾರಿ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. 1991ರಲ್ಲಿ ಕಾಂಗ್ರೆಸ್ ಜಿಐ ಪಟೇಲ್ ಅವರನ್ನು ಸೋಲಿಸುವ ಮೂಲಕ ಅಡ್ವಾಣಿ ಇಲ್ಲಿ ಗೆಲುವಿನ ನಗೆ ಬೀರಿದ್ದರು. 2014ರಲ್ಲಿ ನಾಲ್ಕು ಲಕ್ಷ ಮತಗಳ ಅಂತರದಿಂದ ಗೆದ್ದ ಅಡ್ವಾಣಿ ಅವರಿಗೆ ಇದೇ ಕೊನೆಯ ಚುನಾವಣೆಯಾಯಿತು.
ಗುಜರಾತ್ನಲ್ಲಿ ಏಪ್ರಿಲ್ 4ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ರಾಜ್ಯದ 26 ಕ್ಷೇತ್ರಗಳಿಗೆ ಎಪ್ರಿಲ್ 23ರಂದು ಮತದಾನ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/lk-advani-amit-shah-and-pra.gif)