ಪ್ರವಾಹ : ರಕ್ಷಣಾ ಕಾರ್ಯಕ್ಕೆ ಹೆಲಿಕಾಫ್ಟರ್ ಭರವಸೆ ನೀಡಿದ ಸಚಿವೆ!!

ಬೆಳಗಾವಿ: 

     ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಕ್ಕೆ ಹೆಲಿಕಾಫ್ಟರ್ ಅವಶ್ಯಕತೆ ಇದ್ದರೆ ಒದಗಿಸುವ ಭರವಸೆಯನ್ನು ‌ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದಾರೆ.

     ಜಲ ಪ್ರಳಯದಿಂದ ನಲುಗಿರುವ ಉತ್ತರ ಕರ್ನಾಟಕ ಭಾಗದ ಪರಿಸ್ಥಿತಿ ಅವಲೋಕಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ‌ಬೆಳಗಾವಿಗೆ ಆಗಮಿಸಿದ್ದಾರೆ.

ಬೆಳಗಾವಿಗೆ ಕೇಂದ್ರ ಸಚಿವೆ

     ಇಂದು ವಿಶೇಷ ವಿಮಾನದಲ್ಲಿ ಆಗಮಸಿದ ಅವರು ಶನಿವಾರ ಬೆಳಗ್ಗೆ 11.30ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ತಲುಪಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಡಿ ಸಿ ಡಾ. ಎಸ್. ಬಿ.ಬೊಮ್ಮನಹಳ್ಳಿ ‌ಅವರಿಂದ ನೆರೆ ಹಾನಿ ಬಗ್ಗೆ ನಿರ್ಮಲಾ ಮಾಹಿತಿ ಪಡೆದರು. ವಿಮಾನ ನಿಲ್ದಾಣದಲ್ಲೇ ಕೆಲಹೊತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಕ್ಷಣಾ ಕಾರ್ಯಕ್ಕೆ ಹೆಲಿಕಾಫ್ಟರ್ ಅವಶ್ಯಕತೆ ಇದ್ದರೆ ಒದಗಿಸುವ ಭರವಸೆಯನ್ನು ‌ನೀಡಿದರು.

     ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ, ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಚಿವೆಗೆ ಸಾಥ್ ನೀಡಿದರು. ಸಭೆಯ ಬಳಿಕ ಪ್ರವಾಹಪೀಡಿತ ಪ್ರದೇಶಗಳ ಭೇಟಿಗೆ ತೆರಳಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap