ಚಳ್ಳಕೆರೆ;
ನಗರದ 29ನೇ ವಾರ್ಡ್ನ ಅಂಬೇಡ್ಕರ್ ನಗರದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಎರಡು ಗುಡಿಸಲುಗಳು ಸಂಪೂರ್ಣ ಸುಟ್ಟಿದ್ದು, ಲಕ್ಷಾಂತರ ರೂ ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಕಳೆದ ಹಲವಾರು ವರ್ಷಗಳಿಂದ ಗುಡಿಸಲುಗಳನ್ನು ಕಟ್ಟಿಕೊಂಡು ಜೀವನ ನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕರಾದ ತಿಪ್ಪೇಸ್ವಾಮಿ ಮತ್ತು ಕಾಂತರಾಜು ಎಂಬುವವರಿಗೆ ಸೇರಿದ ಗುಡಿಸಲುಗಳಾಗಿದ್ದು, ರಾತ್ರಿ ಸಮಯದಲ್ಲಿ ಈ ಘಟಕ ಸಂಭವಿಸಿದ್ದು, ಕೂಡಲೇ ಮನೆಯಲ್ಲಿದ್ದ ಎಲ್ಲರೂ ಜೀವ ರಕ್ಷಿಸಿಕೊಳ್ಳಲು ಹೊರ ಬಂದಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ.
ಅಗ್ನಿಶಾಮಕ ಪಡೆ ಆಗಮಿಸಿ ಬೆಂಕಿ ನಂದಿಸಿದೆ. ವಾರ್ಡ್ ಸದಸ್ಯ ಎಚ್.ಪ್ರಶಾಂತ್ ಕುಮಾರ್ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ನೊಂದವರಿಗೆ ಸಾಂತ್ವನ ತಿಳಿಸಿದರು. ಪೌರಾಯುಕ್ತ ಜೆ.ಟಿ.ಹನುಮಂತರಾಜು, ಪಿಎಸ್ಐ ಕೆ.ಸತೀಶ್ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ನಷ್ಟದ ವಿವರ ಪಡೆದರು. ಕಂದಾಯ ಇಲಾಖೆ ಅಧಿಕಾರಿಗಳು ವರದಿ ನೀಡಿದ ನಂತರ ಹೆಚ್ಚಿನ ಪರಿಹಾರ ದೊರಕಿಸಿಕೊಡುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
