ಪ್ರಧಾನಿ ಮೋದಿಗೆ ನೊಬೆಲ್ ಶಾಂತಿ ಪುರಸ್ಕಾರ !?

ಚೆನ್ನೈ:

      ಸೆ.23 ರಂದು ಮೋದಿಯವರು ರಾಂಚಿಯಲ್ಲಿ ಚಾಲನೆ ನೀಡಿದ ವಿಶ್ವದ ಅತಿದೊಡ್ಡ ಸರ್ಕಾರಿ ವಿಮಾ ಯೋಜನೆ ‘ಆಯುಷ್ಮಾನ್ ಭಾರತ್ ‘ಗಾಗಿ 2019ರ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನ ಮಾಡಿರುವುದಾಗಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆ ತಮಿಳ್‌ಸಾಯ್ ಸೌಂದರರಾಜನ್ ಒತ್ತಾಯಿಸಿರುವುದಲ್ಲದೇ, ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮೋದಿ ಅವರ ಹೆಸರನ್ನು ಶಿಫಾರಸ್ಸು ಮಾಡಲು ತಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಅವರು ಜನರ ಬಳಿ ಮನವಿ ಮಾಡಿದ್ದಾರೆ.

      “ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಆಯುಷ್ಮಾನ್ ಭಾರತ ಯೋಜನೆಯೂ ಕೋಟ್ಯಂತರ ಬಡವರ ಬದುಕಿನ ಆಶಾಕಿರಣವಾಗಲಿದೆ. ಇದು ಹಲವರ ಬದುಕನ್ನು ಬದಲಿಸಲಿದೆ” ಎಂದು ಅವರು ಹೇಳಿದರು. 

      ‘ನೊಬೆಲ್ ಪುರಸ್ಕಾರಕ್ಕಾಗಿ ಪ್ರತೀ ವರ್ಷದ ಸೆಪ್ಟೆಂಬರ್‌ನಲ್ಲಿ ನಾಮ ನಿರ್ದೇಶನ ಆರಂಭವಾಗಲಿದ್ದು, 2019ರ ಸಾಲಿನ ನೊಬೆಲ್ ನಾಮ ನಿರ್ದೇಶನಕ್ಕೆ 2019ರ ಜ.31 ಕೊನೆಯ ದಿನವಾಗಿದೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap