ನವದೆಹಲಿ:
ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ದಿನ ಗಣನೆ ಶುರುವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಈ ಜವಾಬ್ಧಾರಿಯನ್ನು ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ವಹಿಸಲಾಗಿದೆ ಎನ್ನಲಾಗಿದೆ.
ಈ ಬಾರಿಯ ದೋಸ್ತಿ ಸರಕಾರದ ಸಚಿವ ಸಂಪುಟ ವಿಸ್ತರಣೆ ವೇಳೆಯಲ್ಲಿ ಸಿದ್ದರಾಮಯ್ಯ ಅವರು ಹೇಳುವವರಿಗೆ ಸಚಿವ ಸ್ಥಾನವನ್ನು ನೀಡುವುದಕ್ಕೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಖಾಲಿ ಇರುವ 6 ಸಚಿವ ಸ್ಥಾನಗಳ ಪೈಕಿ ಕಾಂಗ್ರೆಸ್ ನಿಂದ 20ಕ್ಕು ಅಧಿಕ ಮಂದಿ ಪೈಪೋಟಿ ನಡೆಸುತ್ತಿರುವುದು ಕಾಂಗ್ರೆಸ್ ದೊಡ್ಡ ತಲೆನೋವಾಗಿದೆ.
ಈ ಹಿಂದೆ ಕಾಂಗ್ರೆಸ್ ನ ಕೆಲ ಶಾಸಕರು ಸಿಡಿದೆದ್ದ ವೇಳೆಯಲ್ಲಿ ಖುದ್ದು ಸಿದ್ದರಾಮಯ್ಯ ಅವರೇ ನಿಂತು ಸಮಸ್ಯೆಯನ್ನು ಬಗೆ ಹರಿಸಿದ್ದರು, ಇನ್ನು ಸಚಿವ ಸ್ಥಾನ ವಿಸ್ತರಣೆಯಾದ ಬಳಿಕ ಉಂಟಾಗುವ ಭಿನ್ನಮತವನ್ನು ಶಮನ ಮಾಡುವುದಕ್ಕೆ ಮಾಜಿ ಸಿಎಂ ಸಿದ್ದು ಅವರ ಹೆಗಲಿಗೆ ಕಾಂಗ್ರೆಸ್ ಹೈ ಕಮಾಂಡ್ ಜವಾಬ್ಧಾರಿ ಹೊರಿಸಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/rajiv-gandhi-death-annivers.gif)