ನವದೆಹಲಿ:
ಮಹಾಮಾರಿ ಕೊರೊನಾ ದೇಶಾದ್ಯಂತ ರುದ್ರ ನರ್ತನ ಮೆರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈವರೆಗೆ ಒಟ್ಟು ಕೋವಿಡ್-19 ಪ್ರಕರಣಗಳು 3,000 ಸಮೀಪಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ದೇಶದಲ್ಲಿ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 68 ಮುಟ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 2,902 ತಲುಪಿದ್ದು, ಪ್ರಸ್ತುತ 2,650 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 183 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಶುಕ್ರವಾರ ಒಂದೇ ದಿನ ದೇಶದಲ್ಲಿ ಸುಮಾರು 335 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಬಹುತೇಕ ಹೊಸ ಪ್ರಕರಣಗಳು ನಿಜಾಮುದ್ದೀನ್ ಪ್ರದೇಶದಲ್ಲಿ ಕಳೆದ ತಿಂಗಳು ನಡೆದಿದ್ದ ಧಾರ್ಮಿಕ ಸಭೆಗೆ ಸಂಬಂಧಿಸಿದ್ದೇ ಆಗಿವೆ. ದೆಹಲಿ ತಬ್ಲೀಗ್ ಜಮಾತ್ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದವರು ಹಾಗೂ ಅವರಿಂದ ಸೋಂಕು ವ್ಯಾಪಿಸಿರುವುದಕ್ಕೆ ಸೇರಿ ಒಟ್ಟು 647 ಪ್ರಕರಣಗಳು ವರದಿಯಾಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
