ಮಾರ್ಚ್‌ 31ರ ವರೆಗೆ ದೇಶದ್ಯಂತ ರೈಲ್ವೆ ಸಂಚಾರ ಸ್ಥಗಿತ‌!!

ನವದೆಹಲಿ :

      ಕೊರೊನಾ ವೈರಸ್ ಹೆಚ್ಚಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ವೈರಸ್ ಹರಡುವುದನ್ನು ತಡೆಗಟ್ಟಲು ಎಲ್ಲಾ ರೈಲುಗಳ ಸಂಚಾರವನ್ನು ಮಾರ್ಚ್ 31ರವರೆಗೆ ಸ್ಥಗಿತಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.

     ಇಂದು ಪ್ರಧಾನಿ ಮೋದಿ ಕರೆ ನೀಡಿದಂತೆ ದೇಶಾದ್ಯಂತ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ದೈನಂದಿನ ವ್ಯವಹಾರಗಳು ಸಂಪೂರ್ಣ ಸ್ಥಗಿತಗೊಂಡಿವೆ. ರೈಲು ಸೇವೆ ಸಹ ರದ್ದಾಗಿದ್ದು, ಇದೀಗ ಮಾ.31 ವರೆಗೂ ರೈಲು ಸೇವೆ ರದ್ದು ಮಾಡಿ ರೈಲ್ವೇ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 

      ಇನ್ನು ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಮಾ.31ರವರೆಗೂ ಎರಡು ಇಡೀ ರಾಜಸ್ಥಾನ ಮತ್ತು ಪಂಜಾಬ್ ರಾಜ್ಯಗಳು ಸಂಪೂರ್ಣವಾಗಿ ಬಂದ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap