ಮುಂಬೈ:
ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ (ಎನ್ಸಿಎ) ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.
ದ್ರಾವಿಡ್ ಎನ್ಸಿಎನ ಎಲ್ಲ ಕ್ರಿಕೆಟ್ ಸಂಬಂಧಿ ಚಟುವಟಿಕೆಗಳ ಮೇಲೆ ಮೇಲ್ವಿಚಾರಣೆ ನಡೆಸಲಿದ್ದಾರೆ. ಎನ್ಸಿಎನ ಆಟಗಾರರು ಹಾಗೂ ಕೋಚ್ಗಳು, ಸಹಾಯಕ ಸಿಬ್ಬಂದಿಗೆ ತರಬೇತಿ, ಕೋಚಿಂಗ್ ಹಾಗೂ ಉತ್ತೇಜನ ನೀಡಲಿದ್ದಾರೆ ಎಂದು ಬಿಸಿಸಿಐ ಪ್ರಕಟನೆಯೊಂದರಲ್ಲಿ ತಿಳಿಸಿದೆ.
ತಮ್ಮ ಹೊಸ ಜವಾಬ್ದಾರಿ ಮೂಲಕ ದ್ರಾವಿಡ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗಳಿಗೆ ಮಾರ್ಗದರ್ಶನ ಮತ್ತು ತರಬೇತಿ ನೀಡಲಿದ್ದಾರೆ. ಯುವ ಆಟಗಾರರಿಗೆ ತರಬೇತಿ ಮತ್ತು ಅಕಾಡೆಮಿಯ ಅಭಿವೃದ್ಧಿಗೊಳಿಸುವಲ್ಲಿ ಭಾರತ ತಂಡ ಮಾಜಿ ಆಟಗಾರ ಕಾರ್ಯ ನಿರ್ವಹಿಸಲಿದ್ದು, ಹಿರಿಯ ಪುರುಷರ ಮತ್ತು ಮಹಿಳೆಯರ ಮುಖ್ಯ ಕೋಚ್ಗಳಿಗೆ ಬೇಕಾದ ಸಲಹೆಗಳನ್ನು ಭಾರತದ ‘ಗೋಡೆ’ ನೀಡಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಪ್ರಸ್ತುತ ಭಾರತ-ಎ ಮತ್ತು 19 ವರ್ಷದೊಳಗಿನ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ‘ದಿ ವಾಲ್ ಆಫ್ ಕ್ರಿಕೆಟ್’ ರಾಹುಲ್ ದ್ರಾವಿಡ್ ಅವರಿಗೆ ಹೊಸ ಜವಾಬ್ದಾರಿ ನೀಡಿ ಭಾರತೀಯ ಕ್ರಿಕೆಟ್ ಮಂಡಳಿ ಶುಭ ಹಾರೈಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/07/dravid-getty-1547177477.gif)