ಸಹದ್ಯೋಗಿಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಯೋಧ!!

ಶ್ರೀನಗರ:

      ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ ಮೂವರು ಯೋಧರಿಗೆ ಅವರ ಸಹೋದ್ಯೋಗಿಯೇ ಗುಂಡಿಕ್ಕಿ ಹತ್ಯೆ ಮಾಡಿ  ಬಳಿಕ ತಾನೂ ಶೂಟ್‌ ಮಾಡಿಕೊಂಡಿರುವ ಘಟನೆ ಬುಧವಾರ ಜಮ್ಮು ಮತ್ತು ಕಾಶ್ಮೀರದ ಉಧಾಮ್‌ಪುರ ಕ್ಯಾಂಪ್‌ನಲ್ಲಿ ನಡೆದಿದೆ.

      ಬಟಾಲ್ ಬಾಲಿಯಾ ಕ್ಯಾಂಪ್‍ನಲ್ಲಿದ್ದ 187 ನೇ ಬೆಟಾಲಿಯನ್‍ನ ಸಿಆರ್‍ಪಿಎಫ್ ಯೋಧರ ನಡುವೆ ವಾಗ್ವಾದ ನಡೆದಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇದರ ನಡುವೆ ಒಬ್ಬ ಯೋಧ ಗುಂಡು ಹಾರಿಸಿದ್ದಾನೆ. ಇದರಿಂದ ಮೂವರು ಗುಂಡೇಟು ತಗುಲಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.

      ನಂತರ ಆ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯೋಧನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಆರ್‌ಪಿಎಫ್‌ ಮತ್ತು ಪೊಲೀಸ್‌ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

 

Recent Articles

spot_img

Related Stories

Share via
Copy link