ಫನಿ ಚಂಡಮಾರುತದ ಅಬ್ಬರಕ್ಕೆ ಐವರು ಬಲಿ!!!

      ಒಡಿಶಾದ ರಾಜಧಾನಿ ಭುವನೇಶ್ವರ ಸೇರಿದಂತೆ ಕರಾವಳಿ ತೀರದ 15 ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ವಿದ್ಯುತ್ ಸಂಪರ್ಕವನ್ನು ನಿಲ್ಲಿಸಲಾಗಿದೆ. ಬಸ್‌ ಸಂಚಾರ, ರೈಲು ಸಂಚಾರ ಮತ್ತು ವಿಮಾನ ಸಂಚಾರವನ್ನು ನಿಲ್ಲಿಸಲಾಗಿದೆ. ಮೂರು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

 

      ಪ್ರಚಂಡ ಬಿರುಗಾಳಿಗೆ ತರಗೆಲೆಯಂತಾದ ಮರಗಳು, ಕರೆಂಟ್ ಕಂಬಗಳು ಪುರಿ ರಸ್ತೆಗೆ ಉರುಳಿ ಬಿದ್ದಿವೆ. ಇನ್ನೂ ಸಣ್ಣ ಪುಟ್ಟ ವಸ್ತುಗಳೆಲ್ಲಾ ಆಗಸದಲ್ಲಿ ಹಾರುತ್ತಿವೆ. ಸುಮಾರು 10 ಸಾವಿರ ಗ್ರಾಮಗಳಲ್ಲಿ ಫೋನಿ ಎಫೆಕ್ಟ್ ಆಗುತ್ತಿದೆ. ಸಮುದ್ರದಲ್ಲಿ ರಕ್ಕಸ ಗಾತ್ರದ ಅಲೆಗಳು ಏಳುತ್ತಿದೆ.

     ಮುನ್ನೆಚ್ಚರಿಕಾ ಕ್ರಮವಾಗಿ ಸಮುದ್ರ ತೀರದಲ್ಲಿರುವ 15 ಜಿಲ್ಲೆಗಳ ಸುಮಾರು 12 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ. 4.3 ಲಕ್ಷ ಜನರಿಗೆ ಈಗಾಗಲೇ ಸುರಕ್ಷಿತ ವಸತಿ ಕಲ್ಪಿಸಲಾಗಿದೆ. ಈ ಜನರಿಗೆ ಆಹಾರ ಒದಗಿಸಲು 5000 ಅಡುಗೆ ಮನೆಯನ್ನು ತೆರೆಯಲಾಗಿದೆ ಎಂದು ಒಡಿಶಾ ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ ತಿಳಿಸಿದ್ದಾರೆ.

      ಚಂಡಮಾರುತದಿಂದಾಗಿ ಭೂಕುಸಿತ ಸಂಭವಿಸುತ್ತಿದ್ದು, ಮಧ್ಯಾಹ್ನದವರೆಗೆ ಭೂ ಕುಸಿತ ಮುಂದುವರೆಯುವ ಸಾಧ್ಯತೆಯಿದೆ. ಮನೆಯಿಂದ ಹೊರ ಬರದಂತೆ ಜನರಿಗೆ ಮನವಿ ಮಾಡಲಾಗಿದೆ ಎಂದು  ಹವಾಮಾನ ಇಲಾಖೆ ತಿಳಿಸಿದೆ. ಜನರು ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದೇ ಒಬ್ಬೊಬ್ಬರ ಕೈಯನ್ನು ಹಿಡಿದುಕೊಂಡು ತಮ್ಮ ಮನೆಗೆ ಸೇರಿಕೊಳ್ಳುತ್ತಿದ್ದಾರೆ.


ಚಂಡಮಾರುತದ ಅಬ್ಬರಕ್ಕೆ ತತ್ತರಿಸಿರುವ ಒಡಿಶಾ, ಪಶ್ಚಿಮ ಬಂಗಾಲ ಕರಾವಳಿಯ ಜನರ ಅನುಕೂಲಕ್ಕಾಗಿ ಕೇಂದ್ರ ಗೃಹ ಸಚಿವಾಲಯವು 1938 ಸಹಾಯವಾಣಿ ಸಂಖ್ಯೆಗೆ ಚಾಲನೆ ನೀಡಿದೆ.


     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

 

Recent Articles

spot_img

Related Stories

Share via
Copy link