ದೆಹಲಿ:
ನಾಲ್ಕು ದಿನಗಳ ಹಿಂದೆ ಪಾಕ್ ಸೇನೆಯಿಂದ ಬಂಧಿತರಾಗಿ, ನಿನ್ನೆ ರಾತ್ರಿ ಬಿಡುಗಡೆಯಾಗಿ ಬಂದಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭೇಟಿ ಮಾಡಿದರು.
#Visual: Defence Minister Nirmala Sitharaman met Wing Commander Abhinandan Varthman at a hospital in Delhi today. pic.twitter.com/WD927TQHOV
— ANI (@ANI) March 2, 2019
ಭಾರತದ ವಾಯುಗಡಿ ದಾಟಿ ಬಂದ ಪಾಕಿಸ್ತಾನದ ಯುದ್ಧ ವಿಮಾನಗಳನ್ನು ಹಿಮ್ಮೆಟ್ಟಿಸುವ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿ ಬಂಧಿಯಾಗಿದ್ದ ಭಾರತೀಯ ವಾಯು ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ನಿನ್ನೆ(ಶುಕ್ರವಾರ) ರಾತ್ರಿ 9.15 ಕ್ಕೆ ವಿಂಗ್ ಕಮಾಂಡರ್ ಅಭಿನಂದನ್ ಅವರು ತಾಯ್ನಾಡಿಗೆ ಆಗಮಿಸಿದ್ದರು.
ನಂತರ ಅವರನ್ನು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಭಿನಂದನ್ ಅವರು ಚಿಕಿತ್ಸೆ ಪಡೆಯುತ್ತಿರುವಲ್ಲಿಗೇ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಕುಶಲೋಪರಿ ವಿಚಾರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
