ನವದೆಹಲಿ :
ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ರಾಷ್ಟ್ರಪತಿಗಳ ಮುಂದೆ ಮತ್ತೊಮ್ಮೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ಮಾರ್ಚ್ 3ರಂದು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಡೆತ್ ವಾರೆಂಟ್ ಜಾರಿಗೊಳಿಸಲಾಗಿದೆ.
ತಿಹಾರ್ ಜೈಲಿನಲ್ಲಿರುವ 31 ವರ್ಷದ ಅಕ್ಷಯ್ ಕುಮಾರ್ ಸಿಂಗ್ ಫೆಬ್ರವರಿ 1ರಂದು ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಫೆಬ್ರವರಿ 5ರಂದು ರಾಷ್ಟ್ರಪತಿಗಳು ಅದನ್ನು ತಿರಸ್ಕರಿಸಿದ್ದರು. ಈಗ 2ನೇ ಬಾರಿಗೆ ಅರ್ಜಿ ಸಲ್ಲಿಸಿದ್ದಾನೆ.
ದೆಹಲಿ ನ್ಯಾಯಾಲಯಕ್ಕೂ ಅಕ್ಷಯ್ ಕುಮಾರ್ ಸಿಂಗ್ ಅರ್ಜಿ ಸಲ್ಲಿಸಿದ್ದು ತನ್ನ ವಿರುದ್ಧ ಹೊರಡಿಸಿರುವ ಡೆತ್ ವಾರೆಂಟ್ಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾನೆ. ಇದರಿಂದಾಗಿ ಮಾರ್ಚ್ 3ರಂದು ಅಪರಾಧಿಗಳನ್ನು ಗಲ್ಲಿಗೆ ಹಾಕುವ ಪ್ರಕ್ರಿಯೆ ನಡೆಯುವುದು ಅನುಮಾನವಾಗಿದೆ.
ಮೊದಲ ಬಾರಿ ತಿರಸ್ಕಾರವಾಗಿರುವ ಕ್ಷಮಾದಾನ ಅರ್ಜಿಯಲ್ಲಿ ಎಲ್ಲಾ ಅಂಶಗಳನ್ನು ಉಲ್ಲೇಖಿಸಿಲ್ಲ ಎಂದು ಅಕ್ಷಯ್ 2ನೇ ಅರ್ಜಿಯಲ್ಲಿ ಹೇಳಿದ್ದಾನೆ. ಎಲ್ಲಾ ಅಪರಾಧಿಗಳು ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ಈಗಾಗಲೇ ತಿರಸ್ಕರಿಸಿದ್ದಾರೆ. ಅಕ್ಷಯ್ ಎರಡನೇ ಬಾರಿ ಕ್ಷಮಾದಾನ ಕೋರಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/1.jpg)