ನವದೆಹಲಿ :
ಆರ್.ಎಂ.ಎಲ್ ಆಸ್ಪತ್ರೆಯಲ್ಲಿದ್ದ ಶಾಸಕ ಡಿ.ಕೆ ಶಿವಕುಮಾರ್ ಅವರನ್ನು ಪೊಲೀಸರು ಇಂದು ತಿಹಾರ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.
ಆರ್.ಎಂ.ಎಲ್ ಆಸ್ಪತ್ರೆ ವೈದ್ಯರು ಶಿವಕುಮಾರ್ ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎನ್ನುವ ವರದಿ ನೀಡಿರುವ ಹಿನ್ನಲೆಯಲ್ಲಿ, ಪೊಲೀಸರು ಅವರನ್ನು ತಿಹಾರ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಅಕ್ಟೋಬರ್ 1ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಅಲ್ಲದೇ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ ನಡೆಯಲಿದೆ.
ಇನ್ನು ಡಿಕೆಶಿ ಅವರು ತಿಹಾರ್ ಜೈಲಿನ ಸೆಲ್ ನಂಬರ್ 7 ರಲ್ಲಿ ಇರಲಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/dk-shi.gif)