ಕೇಂದ್ರ ಸಂಪುಟಕ್ಕೆ ಸಚಿವ ಡಿವಿ ಸದಾನಂದಗೌಡ ರಾಜೀನಾಮೆ!!

ನವದೆಹಲಿ : 

      ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎರಡನೇ ಅವಧಿಯಲ್ಲಿ ಮೊದಲ ಬೃಹತ್ ಸಂಪುಟ ಪುನಾರಚನೆಗೆ ಮುಂಚಿತವಾಗಿ ಸಚಿವರಾದ ಡಿವಿ ಸದಾನಂದಗೌಡ  ಇಂದು ರಾಜೀನಾಮೆ ನೀಡಿದ್ದಾರೆ.

      ಹಿರಿಯ ಸಂಸದರನ್ನು ಹೊರತುಪಡಿಸಿ, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಅವರು ಸಂಪುಟಕ್ಕೆ ಸೇರುವ ಸಾಧ್ಯತೆಯಿದೆ. ಆದರೆ ಅವರಿಗೆ ದೆಹಲಿಯಿಂದ ಕರೆ ಬಂದಿದೆಯೆ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

      ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಯುವಕರು, ವಿದ್ಯಾವಂತರು ಮತ್ತು ಆಡಳಿತದಲ್ಲಿ ಅನುಭವವಿರುವವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

      ಇಂದು ಸಚಿವ ಸಂಪುಟವನ್ನು ಪುನಾರಚಿಸಲಿದ್ದು, ಸಂಪುಟ ಪುನರಚನೆ ಬಳಿಕ ಬುಧವಾರ ಸಂಜೆ 5.30ರಿಂದ 6ರ ನಡುವೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap