ನವದೆಹಲಿ :
ಈಗಾಗಲೇ ಇಡಿ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ದೆಹಲಿಯಲ್ಲಿರುವ ಡಿಕೆಶಿ ಆಪ್ತ ಆಂಜನೇಯ ಹನುಮಂತಯ್ಯ ಮನೆ ಮೇಲೆ ಇಡಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಇವರ ಮೇಲೆ ಇಡಿ ಅಧಿಕಾರಿಗಳು ಹಲವು ದಿನಗಳಿಂದ ನಿಗಾ ಇರಿಸಿದ್ದರು ಎನ್ನಲಾಗಿದೆ.
ಡಿ.ಕೆ. ಶಿವಕುಮಾರ್ ಅವರ ದೆಹಲಿಯ 4 ಫ್ಲಾಟ್ ಗಳ ಉಸ್ತುವಾರಿಯನ್ನು ಶರ್ಮಾ ಟ್ರಾವೆಲ್ಸ್ ನ ಸುಶೀಲ್ ಕುಮಾರ್ ಶರ್ಮಾ ನೋಡಿಕೊಳ್ಳುತ್ತಿದ್ದಾರೆ. ಅಲ್ಲದೇ ದೆಹಲಿಯಲ್ಲಿ ಹಣ ರವಾನೆ ಜವಾಬ್ದಾರಿಯನ್ನು ಶರ್ಮಾ ಹಾಗೂ ಹನುಮಂತಯ್ಯ ವಹಿಸಿಕೊಂಡಿದ್ದರು ಎಂಬ ಆರೋಪವಿದೆ.
ದೆಹಲಿಯ ಸಫ್ಜರ್ ದಂಗ್ ಎನ್ಕ್ಲೇವ್ ಅಪಾರ್ಟ್ಮೆಂಟ್ ನಲ್ಲಿ ಸಿಕ್ಕ ಹಣದ ಲೆಕ್ಕ ನೀಡಲು ವಿಫಲರಾಗಿ ಡಿಕೆ ಶಿವಕುಮಾರ್ ಜೈಲು ಸೇರಿದ್ದಾರೆ. ಈಗ ಅವರ ಆಪ್ತ ಆಂಜನೇಯ ಹನುಮಂತಯ್ಯ ಮನೆ ಮೇಲೆ ‘ಇಡಿ’ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಡಿ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿರುವ ಇಡಿ ಅಧಿಕಾರಿಗಳು 7 ನೇ ದಿನವಾದ ಮಂಗಳವಾರ ಕೂಡ ವಿಚಾರಣೆಗೆ ಒಳಪಡಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
