ಭೀಕರ ಎನ್ ಕೌಂಟರ್ ; 5 ಮಂದಿ ಭದ್ರತಾ ಸಿಬ್ಬಂದಿಗಳು ಹುತಾತ್ಮ!

ಬಿಜಾಪುರ್ : 

     ಛತ್ತೀಸ್ ಘಡದಲ್ಲಿ ಭೀಕರ ನಕ್ಸಲ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

     ಛತ್ತೀಸ್ ಘಡದ ಬಿಜಾಪುರ ಜಿಲ್ಲೆಯ ಟರ್ರೇಮ್ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಇಂದು ಬೆಳಗ್ಗೆಯಷ್ಚೇ ಡಿಜಿಪಿ ಅವಸ್ಥಿ ಅವರು ಸುದ್ದಿಗೋಷ್ಠಿ ಕರೆದು ಓರ್ವ ಭದ್ರತಾ ಸಿಬ್ಬಂದಿ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರು. ಆದರೆ ಈ ಸಂಖ್ಯೆ ಇದೀಗ 5ಕ್ಕೆ ಏರಿಕೆಯಾಗಿದೆ.

     ಇನ್ನು ಕೇವಲ ಭದ್ರತಾ ಪಡೆಗಳಲ್ಲಿ ಮಾತ್ರವಲ್ಲ ನಕ್ಸಲರ ಪಾಳಯದಲ್ಲೂ ಭಾರಿ ಸಾವು-ನೋವು ಸಂಭವಿಸಿದೆ. ಪ್ರಸ್ತುತ ಎನ್ ಕೌಂಟರ್ ಪ್ರಗತಿಯಲ್ಲಿರುವುದರಿಂದ ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದರೆ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap