ಎನ್ ಕೌಂಟರ್ ದಾಳಿ: ಇಬ್ಬರು ಲಷ್ಕರ್ ಉಗ್ರರ ಹತ್ಯೆ!!

ಶ್ರೀನಗರ:

     ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಸದೆ ಬಡಿಯುವಲ್ಲಿ ಸೇನೆ ಯಶಸ್ವಿಯಾಗಿದೆ.

      ಗಂಡೆರ್ಬಾಲ್ ಜಿಲ್ಲೆಯ ಸ್ಥಳವೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿಯೊಂದಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಯೋಧರು ಮತ್ತು ಭಾರತೀಯ ಸೇನಾ ಸಿಬ್ಬಮದಿ ಜಂಟಿ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಇಬ್ಬರನ್ನು ಹತ್ಯೆಗೈಯ್ಯಲಾಗಿದೆ.

    ಈ ಇಬ್ಬರು ಉಗ್ರರೂ ಲಷ್ಕರ್ ಇ ತೊಯಿಬಾ ಉಗ್ರ ಸಂಘಟನೆಗೆ ಸೇರಿದವರೆಂದು ತಿಳಿದುಬಂದಿದೆ. ಇನ್ನೂ ಎರಡರಿಂದ ಮೂರು ಉಗ್ರರು ಸ್ಥಳದಲ್ಲಿರುವ ಮಾಹಿತಿಯಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link