ಸಂಪರ್ಕಕ್ಕೆ ಸಿಗದ ವಿಕ್ರಮ್ ಲ್ಯಾಂಡರ್ : ನನಸಾಗದ ಭಾರತೀಯರ ಕನಸು!!

ಭುವನೇಶ್ವರ್(ಒಡಿಶಾ):

Image result for k sivan

       ವಿಕ್ರಮ್ ಲ್ಯಾಂಡರ್​ ಜೊತೆ ಸಂಪರ್ಕ ಸಾಧಿಸುವ ಪ್ರಯತ್ನ ವಿಫಲವಾಗಿದೆ ಎಂದು ಇಸ್ರೋ ಮುಖ್ಯಸ್ಥ ಕೆ.ಸಿವನ್ ಹೇಳಿದ್ದಾರೆ.

     ಚಂದ್ರಯಾನ-2 ಆರ್ಬಿಟ್​ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅದರಲ್ಲಿನ 8 ವಸ್ತುಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ವಿಕ್ರಂ ಲ್ಯಾಂಡರ್​ ಸಂಪರ್ಕ ಮರು ಸ್ಥಾಪಿಸಲು ಪ್ರಯತ್ನ ನಡೆಸಲಾಯಿತಾದರೂ ಸಾಧ್ಯವಾಗಲಿಲ್ಲ. ಇನ್ನು, ನಮ್ಮ ಮುಂದಿನ ಆದ್ಯತೆ ಏನಿದ್ರೂ ಗಗನಯಾನ ಮಿಷನ್ ಎಂದಿದ್ದಾರೆ.

      ಜುಲೈ 22ರ ಮಧ್ಯಾಹ್ನ ಆಂಧ್ರದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಜಿಗಿದಿದ್ದ ಚಂದ್ರಯಾನ-2 ರಾಕೆಟ್ ಸೆಪ್ಟೆಂಬರ್ 2ರಂದು ಚಂದ್ರನ ಕಕ್ಷೆ ಸೇರಿತ್ತು. ಯೋಜನೆಯಂತೆ ಸೆಪ್ಟೆಂಬರ್ 7ರ ನಸುಕಿನ ಜಾವ ರೋವರ್ ಒಳಗೊಂಡ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆಗಬೇಕಿತ್ತು. ಆದರೆ, ಲ್ಯಾಂಡಿಂಗ್​ಗೂ ಕೆಲ ಕ್ಷಣಗಳ ಮುನ್ನ ಲ್ಯಾಂಡರ್ ಸಂಪರ್ಕ ಕಡಿತವಾಗಿತ್ತು.

     ಈ ಲ್ಯಾಂಡರ್ ಮತ್ತು ರೋವರ್ ಜೀವಿತಾವಧಿ 14 ದಿನಗಳು. ಇಂದು ವಿಕ್ರಮ್‍ನನ್ನು ಪತ್ತೆ ಮಾಡಲು ಸತತ 14 ದಿನಗಳಿಂದ ಹಗಲು-ರಾತ್ರಿ ಶ್ರಮಿಸಿದ ಇಸ್ರೋದ ಗಡುವು ಇಂದು ಮುಕ್ತಾಯಗೊಳ್ಳಲಿದೆ. 

      ಈ ಗಡುವು ಮುಗಿಯಲು ಇನ್ನು ಕೆಲವು ಗಂಟೆಗಳು ಮಾತ್ರ ಬಾಕಿಯಿದ್ದು, ಲ್ಯಾಂಡರ್ ಜೊತೆ ಮರು ಸಂಪರ್ಕ ಸಾಧಿಸುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಇದರೊಂದಿಗೆ ಮತ್ತೊಮ್ಮೆ ವಿಕ್ರಮ್‌ನನ್ನು ಕಣ್ತುಂಬಿಕೊಳ್ಳುವ ಭಾರತೀಯರ ಆಸೆ ಕಮರಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link