ಮಾಜಿ ಶಾಸಕ ಎ.ಕೆ.ಸುಬ್ಬಯ್ಯ ವಿಧಿವಶ!!

ಬೆಂಗಳೂರು:

      ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಈ ರಾಜ್ಯ ಕಂಡ ಅಪ್ರತಿಮ ರಾಜಕಾರಣಿ, ಧೀಮಂತ ನಾಯಕ, ಮಹಾನ್ ಚಿಂತಕ, ಕೊಡವರ ನೈಜ ಪ್ರತಿನಿಧಿ, ಕೊಡಗಿನ ಹುಲಿ, ಮಾಜಿ ಶಾಸಕ ಎ.ಕೆ ಸುಬ್ಬಯ್ಯ ಅವರು ವಿಧಿವಶರಾಗಿದ್ದಾರೆ.

      ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 85 ವರ್ಷದ ಎ.ಕೆ.ಸುಬ್ಬಯ್ಯ ಅವರು ರಾಜ್ಯದ ಉಚ್ಚನ್ಯಾಯಾಲಯದಲ್ಲಿ ಅವರು ವಕೀಲರಾಗಿ ಪ್ರಸಿದ್ದಿ ಪಡೆದುಕೊಂಡಿದ್ದರು.

      ಸುಬ್ಬಯ್ಯ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರು ತಮ್ಮ ನಿವಾಸದಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೇ ವಾರಕ್ಕೆ ಮೂರು ದಿನ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದರು ಅಂತ ಎನ್ನಲಾಗಿದೆ.

      ನಿನ್ನೆ ಬೆಳಗ್ಗೆಯಿಂದ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಇಂದು  ಚಿಕಿತ್ಸೆ ಫಲಕಾರಿಯಾಗದೆ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap