ಹೊಸೂರು:
ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ 7 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಶಾಖೆಯ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ನಡೆದಿದೆ.
ಬೆಳಿಗ್ಗೆ 10 ಗಂಟೆಗೆ ಕಚೇರಿ ತೆರೆದ ಕೆಲ ಸಮಯದಲ್ಲೇ ಒಟ್ಟು 6 ಮಂದಿ ಬಂದೂಕುಧಾರಿಗಳು ಏಕಾಏಕಿ ಕಚೇರಿಗೆ ನುಗ್ಗಿ ಬ್ರಾಂಚ್ ಮ್ಯಾನೇಜರ್ಗೆ ಜೀವ ಬೆದರಿಕೆ ಒಡ್ಡಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದರೋಡೆಕೋರರು 7 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳ ಜೊತೆಯಲ್ಲೇ 96,000 ರೂ. ಹಣವನ್ನು ದುಷ್ಕರ್ಮಿಗಳು ದೋಚಿದ್ದಾರೆ. ಸಿನಿಮೀಯ ರೀತಿಯಲ್ಲಿ ಬಂದೂಕು ತೋರಿಸುತ್ತಾ ಒಳನುಗ್ಗಿದ ದುಷ್ಕರ್ಮಿಗಳು ಕಚೇರಿಯಲ್ಲಿದ್ದ ಸಿಬ್ಬಂದಿಗೆ ಬೆದರಿಸಿ ಕ್ಷಣಾರ್ಧದಲ್ಲಿ ತಮ್ಮ ಕೆಲಸ ಮುಗಿಸಿಕೊಂಡು ಹೊರಟು ಹೋಗಿದ್ದಾರೆ.
ಇದೀಗ ಪೊಲೀಸರು ಮುತ್ತೂಟ್ ಫೈನಾನ್ಸ್ ಸಿಬ್ಬಂದಿ ನೀಡುವ ಮಾಹಿತಿ ಹಾಗೂ ಸಿಸಿಟಿವಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/01/Muthoot-theft.jpg)