ಕೇಂದ್ರ ಬಜೆಟ್‌ 2020 : ರೈತರ ಪಂಪ್‌ ಸೆಟ್‌ಗಳಿಗೆ ಸೋಲಾರ್ ಶಕ್ತಿ!!

ನವದೆಹಲಿ:

      ಕೇಂದ್ರ ಸರ್ಕಾರ 2020-21ನೇ ಸಾಲಿನ ಬಜೆಟ್​ ಮಂಡನೆ ಮಾಡುತ್ತಿದ್ದು, ಕೃಷಿ ನೀರಾವರಿಗೆ ವಿಶೇಷ ಯೋಜನೆ ಘೋಷಣೆ ಮಾಡಲಾಗಿದೆ.

      ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಮಂಡಿಸುತ್ತಿರುವ ಸಂಪೂರ್ಣ ಬಜೆಟ್​ ಇದಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಲೋಕಸಭೆಯಲ್ಲಿ ಬಜೆಟ್​ ಮಂಡನೆ ಮಾಡುತ್ತಿದ್ದಾರೆ.

      ಪಂಪ್‌ ಸೆಟ್ ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ ಘೋಷಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು, ಕೃಷಿ ನೀರಾವರಿಗೆ ಸೋಲಾರ್ ಶಕ್ತಿ. 20 ಲಕ್ಷ ರೈತರಿಗೆ ಕೃಷಿ ಪಂಪ್ ಗೆ ಸಹಾಯ ಮಾಡುವುದಾಗಿ ಬಜೆಟ್ ನಲ್ಲಿ ಹೇಳಲಾಗಿದೆ. ಈ ಮೂಲಕ ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಆಗಲಿದ್ದಾರೆ. 

      ರೈತರು ಉತ್ಪಾದಿಸುವ ಹೆಚ್ಚುವರಿ ವಿದ್ಯುತ್‌ ಅನ್ನು ಗ್ರಿಡ್ ಮೂಲಕ ಸರ್ಕಾರವೇ ಖರೀದಿಸಲಿದೆ. ಈ ಮೂಲಕ ಬರಡು ಭೂಮಿಯಲ್ಲಿಯೂ ರೈತರು ಹಣ ಗಳಿಸಬಹುದು ಎಂದು ಹೇಳಿದರು.

      ರೈತರ ಆದಾಯ ದ್ವಿಗುಣಕ್ಕೆ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ. ಆದಾಯ ವೃದ್ಧಿಗೆ ಸಾಂಪ್ರದಾಯಿಕ ಕೃಷಿಗೆ ಒತ್ತು ನೀಡಲಾಗಿದೆ. 6.11 ಕೋಟಿ ರೈತರಿಗೆ ವಿಮಾ ಯೋಜನೆ. ಕೃಷಿಗಾಗಿ 16 ಅಂಶಗಳ ಕಾರ್ಯಕ್ರಮವನ್ನು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap