ಹೈದರಾಬಾದ್ :
ಸಂಕ್ರಾಂತಿ ಹಬ್ಬಕ್ಕೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಜನರಿಗೆ ಭರ್ಜರಿ ಗಿಫ್ಟ್ ವೊಂದನ್ನು ನೀಡಿದ್ದಾರೆ. ಹೌದು. ಅಧಿಕಾರಕ್ಕೆ ಬಂದಾಗಿನಿಂದಲೂ ಜನರ ಅನುಕೂಲಕ್ಕಾಗಿ ಉಚಿತ ಆಫರ್ ಗಳನ್ನು ನೀಡುತ್ತಾ ಬಂದಿರುವ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಸಂಕ್ರಾಂತಿ ಹಿನ್ನೆಲೆ ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕವನ್ನು ಮನ್ನಾ ಮಾಡಿದ್ದಾರೆ.
3 ದಿನ ಆಚರಿಸಲಾಗುವ ಸಂಕ್ರಾಂತಿ ಪ್ರಯುಕ್ತ ಹೈದರಾಬಾದ್ನಲ್ಲಿ ನೆಲೆಸಿರುವ ವಿವಿಧ ಭಾಗಗಳ ಜನರು ಹಬ್ಬಕ್ಕಾಗಿ ತಮ್ಮ ಹುಟ್ಟೂರಿಗೆ ತೆರಳುತ್ತಿದ್ದಾರೆ. ಅವರಿಗೆ ಅನುಕೂಲವಾಗಲೆಂದು ವಾಹನಗಳ ಮೇಲೆ ಯಾವುದೇ ಟೋಲ್ ವಿಧಿಸಿದಂತೆ ಟೋಲ್ಗಳಿಗೆ ಸರ್ಕಾರ ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
