ಎಸ್‌ಸಿ ಎಸ್‌ಟಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಇಲ್ಲ : ಸುಪ್ರೀಂ!

ದೆಹಲಿ: 

      ಎಸ್‌ಸಿ/ಎಸ್‌ಟಿ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಹೊರ ಬಿದ್ದಿದ್ದು, ಬಡ್ತಿಯಲ್ಲಿ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂ ಆದೇಶ ನೀಡಿದೆ.

      ಇಂದು(ಬುಧವಾರ) ಈ ಕುರಿತು ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್‌ನ ಐವರು ಸದಸ್ಯರ ಸಂವಿಧಾನಿಕ ಪೀಠ, ಸುಪ್ರೀಂ 2006 ರಲ್ಲಿಯೇ ಎಸ್‌ಸಿ/ಎಸ್‌ಟಿ ಬಡ್ತಿ ಕುರಿತು ತೀರ್ಪು ನೀಡಿದ್ದು, ಅದನ್ನು ಮತ್ತೆ ಪುನರ್ ಪರಿಶೀಲಿಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ರೋಹಿಂಗ್ಟನ್ ನಾರಿಮನ್ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.

      ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ್ದ ಅರ್ಟಾನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು, ಈ ಸಮುದಾಯಗಳು ಹಿಂದುಳಿದಿವೆ ನಿಜ. ಆದರೆ, ಪ್ರಾತಿನಿಧ್ಯದ ಕೊರತೆ ಇದೆ ಎಂಬುದನ್ನು ಸಾಬೀತು ಮಾಡಲು ಬೇಕಾದ ದತ್ತಾಂಶ ಸಂಗ್ರಹಿಸುವುದು ಅಸಾಧ್ಯ ಎಂದು ಹೇಳಿದ್ದರು.

      ಹಿಂದುಳಿದವರು ಎಂದು ಹೇಳಲು ಮಾಹಿತಿ ಸಂಗ್ರಹ ಅಗತ್ಯವಿಲ್ಲ ಎಂದು ಸುಪ್ರೀಂ ಹೇಳಿದ್ದು, ಸುಪ್ರೀಂ ಕೋರ್ಟ್ ನ ಇಂದಿನ ತೀರ್ಪಿನಿಂದಾಗಿ ಕೇಂದ್ರ ಸರ್ಕಾರ ನಿರಾಳವಾಗಿದೆ. ಎಸ್‌ಸಿ ಎಸ್‌ಟಿ ನೌಕರರ ಮುಂಬಡ್ತಿ ಕುರಿತು ಎಂ ನಾಗರಾಜ್ ಪ್ರಕರಣದ ಮರು ಪರಿಶೀಲನೆ ಅಗತ್ಯವಿಲ್ಲ ಎಂದು ನ್ಯಾ. ನಾರಿಮನ್ ಸ್ಪಷ್ಟಪಡಿಸಿದ್ದಾರೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

Recent Articles

spot_img

Related Stories

Share via
Copy link
Powered by Social Snap