ನವದೆಹಲಿ:
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಬೇಕೆಂದು ಆಗ್ರಹಿಸಿ ಭಾರತೀಯ ಮುಸ್ಲಿಂ ಲೀಗ್ ಸಂಘಟನೆ(ಐಯುಎಂಎಲ್)ಗುರುವಾರ ಸುಪ್ರೀಂ ಕೋರ್ಟ್ ಗೆ ಎರಡು ಹೊಸ ಅರ್ಜಿ ಸಲ್ಲಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ದೇಶದ ಜನರಲ್ಲಿ ಗೊಂದಲ ಉಂಟಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡುವವರೆಗೆ ಎನ್ ಆರ್ ಸಿ ಮತ್ತು ಎನ್ ಪಿಆರ್ ಪ್ರಕ್ರಿಯೆಗಳಿಗೆ ತಡೆ ನೀಡಬೇಕು. ದೇಶಾದ್ಯಂತ ಎನ್ಆರ್ ಸಿ ಜಾರಿಗೆ ತರುವುದರ ಬಗ್ಗೆ ಸ್ಪಷ್ಟತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಮುಸ್ಲಿಂ ಲೀಗ್ ಹೇಳಿದೆ.
ಪ್ರಧಾನ ಮಂತ್ರಿ, ಗೃಹ ಸಚಿವರು ಮತ್ತಿತರರು ಮೊದಲಿಗೆ ಎನ್ಆರ್ ಸಿ ಹಾಗೂ ಎನ್ ಪಿಆರ್ ಮತ್ತು ಸಿಎಎ ಒಂದಕ್ಕೊಂದು ಪೂರ್ವಗಾಮಿಯಾಗಿದೆ ಎಂದಿದ್ದರು. ನಂತರ ನಡುವಿನ ಸಂಬಂಧವನ್ನು ನಿರಾಕರಿಸುವಂತಹ ಹೇಳಿಕೆ ನೀಡಿದ್ದರು. ದೇಶಾದ್ಯಂತ ಸಿಎಎ ಮತ್ತು ಎನ್ಆರ್ ಸಿ ವಿರುದ್ಧ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಹಿನ್ನಲೆಯಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/SupremeCourtofIndia.gif)