ಲಕ್ನೋ:
ಪೌರತ್ವ ಮಸೂದೆ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಆಗ್ರಾ, ಘಾಜಿಯಾಬಾದ್ ಮತ್ತು ಬುಲಂದ್ಶಹರ್ ಸೇರಿ ಉತ್ತರ ಪ್ರದೇಶದ ಅನೇಕ ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರದ ಪ್ರಾರ್ಥನೆಯ ಬಳಿಕ ಮತ್ತೆ ಆರಂಭವಾದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರಕಾರ ರಾಜ್ಯದಲ್ಲಿ ಕಟ್ಟೆಚ್ಚರ ಘೋಷಿಸಿದ್ದು, ಸುಮಾರು 21 ಜಿಲ್ಲೆಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಡಿತಗೊಳಿಸಿದೆ.
ಪಶ್ಚಿಮ ಉತ್ತರಪ್ರದೇಶದ ಬಿಜ್ನೋರ್, ಬುಲಂದ್ಶಹರ್, ಮುಝಫ್ಫರ್ನಗರ, ಮೀರತ್, ಆಗ್ರಾ, ಫಿರೋಝಾಬಾದ್, ಸಂಭಾಲ್, ಅಲಿಗಢ, ಗಾಝಿಯಾಬಾದ್, ರಾಂಪುರ್, ಸೀತಾಪುರ ಹಾಗೂ ಕಾನ್ಪುರ ಜಿಲ್ಲೆಗಳಲ್ಲಿ ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ಆರಂಭಿಕ ವರದಿಯಲ್ಲಿ ತಿಳಿದುಬಂದಿದೆ.
ರಾಜ್ಯಾದ್ಯಂತ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಬಿಗಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದು, ಯಾವುದೇ ದುರ್ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
