ಸುಪ್ರೀಂನಿಂದ ಚಿದಂಬರಂಗೆ ಜಾಮೀನು ಮಂಜೂರು!!

ದೆಹಲಿ :

      ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.

      ಈ ಹಿಂದೆ ಐಎನ್‌ಎಕ್ಸ್‌ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ, ಬಳಿಕ ಜಾರಿ ನಿರ್ದೇಶನಾಲಯದಿಂದಲೂ ಬಂಧನಕ್ಕೊಳಗಾಗಿದ್ದರು. ತಿಹಾರ್‌ ಜೈಲಿನಲ್ಲಿದ್ದ ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್‌ ಈಗ ಬಿಗ್‌ ರಿಲೀಫ್‌ ನೀಡಿದೆ.

      ಇಬ್ಬರ ಶೂರಿಟಿಯೊಂದಿಗೆ ಜಾಮೀನು ನೀಡಲು ನ್ಯಾಯಾಲಯ ಆದೇಶಿಸಿದ್ದು, ಪಾಸ್‌ ಪೋರ್ಟ್‌ ಅನ್ನು ನ್ಯಾಯಾಲಯದ ವಶಕ್ಕೆ ನೀಡಬೇಕು. ಅಧಿಕಾರಿಗಳ ತನಿಖೆಗೆ ಸಹಕರಿಸಬೇಕು ಎಂಬುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ.

      ನ್ಯಾಯಮೂರ್ತಿ ಭಾನುಮತಿ ನೇತೃತ್ವದ ತ್ರಿ ಸದಸ್ಯ ಪೀಠ ಚಿದಂಬರಂ ಅವರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಇದರಿಂದಾಗಿ ಅವರ 106 ದಿನಗಳ ಸೆರೆವಾಸಕ್ಕೆ ತೆರೆ ಬೀಳಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap