ನವದೆಹಲಿ;
ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರು ಸೋಮವಾರ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜಸ್ಥಾನ ವಿಧಾನಸಭೆಯಲ್ಲಿ ಸಂಖ್ಯೆಯ ಕೊರತೆಯಿಂದಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಯಾವುದೇ ಅಭ್ಯರ್ಥಿಯನ್ನು ನೇಮಿಸಲಿಲ್ಲವಾದ್ದರಿಂದ, ನಾಮಪತ್ರಗಳನ್ನು ಹಿಂಪಡೆಯಲು ನಿಗದಿತ ಸಮಯದ ನಂತರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜ್ಯಸಭೆಗೆ ಅವಿರೋಧವಾಗಿ ಚುನಾಯಿತರಾದರು.

ಡಾ. ಮನಮೋಹನ್ ಸಿಂಗ್ ಅವರ ಪರವಾಗಿ ಮುಖ್ಯ ವಿಪ್ ಮಹೇಶ್ ಜೋಶಿ ಚುನಾವಣಾ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ವಿಧಾನಸಭೆ ಸ್ಪೀಕರ್ ಸಿ.ಪಿ. ಜೋಶಿ ಅವರು ಡಾ. ಮನಮೋಹನ್ ಸಿಂಗ್ ಅವರನ್ನು ಅಭಿನಂದಿಸಿದರು.
“ರಾಜ್ಯಸಭಾ ಸಂಸದರಾಗಿ ಅವಿರೋಧವಾಗಿ ಆಯ್ಕೆಯಾದ ವಿಶ್ವಪ್ರಸಿದ್ಧ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರಿಗೆ ಅಭಿನಂದನೆಗಳು” ಎಂದು ಸ್ಪೀಕರ್ ಸಿ.ಪಿ. ಜೋಶಿ ಮತ್ತು ಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
I congratulate former PM Dr #ManmohanSingh ji on being elected unopposed as a member of #RajyaSabha from #Rajasthan. Dr Singh’s election is a matter of pride for entire state. His vast knowledge and rich experience would benefit the people of Rajasthan a lot. pic.twitter.com/YfkDQTxzpk
— Ashok Gehlot (@ashokgehlot51) August 19, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








