ಕಾರ್ಗಿಲ್ ವಿಜಯದಿವಸ್ ಮರುದಿನವೇ ಇಬ್ಬರು ಉಗ್ರರ ಹತ್ಯೆ!!

ಶೋಪಿಯಾನ್:

      ಐತಿಹಾಸಿಕ ಕಾರ್ಗಿಲ್​ ವಿಜಯ್​ ದಿವಸ್​ನ 20ನೇ ವರ್ಷಾಚರಣೆಯೆ ಮರುದಿನವೇ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

       ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ರಾಷ್ಟ್ರೀಯ ರೈಫಲ್ಸ್‌ (ಆರ್‌ ಆರ್) ತುಕಡಿ, ಸಿಆರ್‌ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸ್‌ನ ವಿಶೇಷ ಕಾರ್ಯಾಚರಣಾ ಪಡೆ, ಶೋಪಿಯಾನ್‍ನ ಮುಖ್ಯ ಪಟ್ಟಣ ಬೋನ್‍ಬಜಾರ್ ನಲ್ಲಿ ಶುಕ್ರವಾರ ತಡರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿವೆ.

      ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ ಆಗಿ ಮಾರ್ಪಟ್ಟಿದೆ. ಪ್ರತಿ ದಾಳಿ ನಡೆಸಿದ ಭದ್ರತಾ ಪಡೆಯ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಭದ್ರತಾ ಪಡೆಯ ಓರ್ವ ಯೋಧ ಮೃತಪಟ್ಟಿದ್ದಾನೆ. ಎರಡೂ ಕಡೆಗಳಿಂದ ಗುಂಡಿನ ಚಕಮಕಿ ಮುಂದುವರಿದಿದ್ದು, ಇನ್ನಷ್ಟು ಮಾಹಿತಿಗಾಗಿ ಎದುರು ನೋಡಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ