ಬೆಂಗಳೂರು:
ಆಂಧ್ರಪ್ರದೇಶದ ತಿರುಮಲದಲ್ಲಿರುವ ಕರ್ನಾಟಕ ರಾಜ್ಯದ 7.05 ಎಕರೆ ಜಾಗದಲ್ಲಿ ನೂತನ ಅತಿಥಿ ಗೃಹವನ್ನು ನಿರ್ಮಾಣ ಮಾಡಲು 200 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ.
ಸೋಮವಾರದ ನಡೆದ ಸಚಿವ ಸಂಪುಟ ಸಭೆಯಲ್ಲಿ ತಿರುಮಲ ಗೆಸ್ಟ್ ಹೌಸ್ ನಿರ್ಮಾಣ ಕಾಮಗಾರಿಗೆ ಅನುಮೋದನೆ ಸಿಕ್ಕಿದ್ದು, ಈ ಕುರಿತು ಕಂದಾಯ ಇಲಾಖೆ ಅಧಿಕೃತ ಪ್ರಕಟಣೆ ನೀಡಿದೆ.
1 ಸಾವಿರಕ್ಕೂ ಹೆಚ್ಚು ಯಾತ್ರಿಕರಿಗೆ ವಸತಿ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಮಹಾನಕ್ಷೆಯಂತೆ ಹೊಸ ವಸತಿ 12 ಡಾರ್ಮೆಂಟ್ರಿಗಳು, 605 ಯಾತ್ರಾರ್ಥಿಗಳ ವಾಸ್ತವ್ಯಕ್ಕಾಗಿ 305 ಕೊಠಡಿಗಳು, ಗಣ್ಯರಿಗೆ ವಿಶೇಷವಾಗಿ 24 ಸೂಟ್ ಕೊಠಡಿಗಳು ಮತ್ತು 4 ಡಬಲ್ ಸೂಟ್ ಕೊಠಡಿಗಳು, 1 ಕಲ್ಯಾಣ ಮಂಟಪ, ಕಾರು, ಬಸ್ಸುಗಳಿಗೆ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ, ಕಲ್ಯಾಣಿ ಜೀರ್ಣೋದ್ಧಾರ, ಹೊಸ ರಸ್ತೆಗಳ ನಿರ್ಮಾಣ, ಲ್ಯಾಂಡ್ ಸ್ಕೆಪಿಂಗ್, ಉದ್ಯಾನವನ ಅಭಿವೃದ್ದಿ ಸೇರಿದಂತೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
