ಇಡಿ ಸಮನ್ಸ್ : ವಿಚಾರಣೆಗಾಗಿ ದೆಹಲಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಜರ್!!

ನವದೆಹಲಿ: 

      ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಅವರಿಗೆ ಇಡಿ ನೋಟಿಸ್ ಜಾರಿಗೊಳಿಸಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ನವದೆಹಲಿಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ.

     ಇಂದು ಬೆಳಗ್ಗೆ 11 ಗಂಟೆಗೆ ಖಾನ್ ಮಾರುಕಟ್ಟೆಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದು, ತನಿಖಾಧಿಕಾರಿಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ.

ಡಿಕೆಶಿ ಪ್ರಕರಣಕ್ಕೆ ಟ್ವಿಸ್ಟ್ : ಇಡಿಯಿಂದ ಲಕ್ಷ್ಮೀಹೆಬ್ಬಾಳ್ಕರ್ ಗೆ ನೋಟಿಸ್!!

      ಡಿ.ಕೆ.ಶಿವಕುಮಾರ್ ಅಕೌಂಟ್​ನಿಂದ ಲಕ್ಷ್ಮಿ ಹೆಬ್ಬಾಳ್ಕರ್ ಖಾತೆಗೆ ಅಕ್ರಮ ಹಣ ವರ್ಗಾವಣೆ ‌ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.14 ರಂದೇ ಇಡಿ‌ ನೋಟಿಸ್ ಜಾರಿಗೊಳಿಸಿತ್ತು. ವಿಚಾರಣೆಗೆ ಮತ್ತೊಂದು‌ ದಿನ‌ ನೀಡುವಂತೆ ಹೆಬ್ಬಾಳ್ಕರ್ ಕೋರಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap