ನವದೆಹಲಿ:
ಮುಂಬರುವ ಲೋಕಸಭಾ ಚುನಾವಣೆ 2019ಕ್ಕಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆ, ಆಶ್ವಾಸನೆಗಳನ್ನು ಇಂದು ಪ್ರಕಟಿಸಿದೆ.
ಪ್ರಣಾಳಿಕೆ ಸಮಿತಿ ಅಧ್ಯಕ್ಷ ಪಿ ಚಿದಂಬರಂ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮುಂತಾದವರ ಸಮ್ಮುಖದಲ್ಲಿ ನವದೆಹಲಿಯಲ್ಲಿಂದು ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ.
ಬಡತನ ನಿರ್ಮೂಲನೆ, ನಿರುದ್ಯೋಗ, ಮಹಿಳಾ ಸುರಕ್ಷತೆ, ರೈತರ ಸಮಸ್ಯೆ, ಶಿಕ್ಷಣ ಎಂಬ ಐದು ಪ್ರಮುಖ ಅಂಶಗಳ ಮೇಲೆ ಹೆಚ್ಚಿನ ಗಮನ ಹರಿಸಿ ‘ಹಮ್ ನಿಭಾಯೇಂಗೆ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಪ್ರಕಟ ಮಾಡಲಾಗಿದೆ.
LIVE: Congress President @RahulGandhi launches 2019 Manifesto. #CongressManifesto2019 https://t.co/th35WGsl63
— Congress (@INCIndia) April 2, 2019
ನಂತರ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಪ್ರಣಾಳಿಕೆ ಒಂದು ಕೊಠಡಿಯಲ್ಲಿ ಸಿದ್ಧಪಡಿಸಿದ್ದಲ್ಲ. ಪ್ರಣಾಳಿಕೆಯನ್ನು ತಯಾರು ಮಾಡಲು ಒಂದು ವರ್ಷದಿಂದ ಶ್ರಮ ವಹಿಸಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷಿ ಬಿಕ್ಕಟ್ಟು ನಿವಾರಣೆಗಾಗಿ, ಆಯಾ ಭಾಗದಲ್ಲಿ ರೈತರು ಬೆಳೆವ ಬೆಳೆಗೆ ಪೂರಕವಾಗಿ ಕೈಗಾರಿಕೆಗಳನ್ನು ಸ್ಥಾಪಿಸಲಾಗುವುದು. ಕನಿಷ್ಠ ಬೆಂಬಲ ಬೆಲೆ ನಿಗದಿ, ಕೃಷಿ ಪೂರಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ