ಮುಂಬೈ:
ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ಬೆನ್ನಿಗೇ ಮುಖ್ಯಮಂತ್ರಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೂ ಪ್ರಮಾಣವಚನ ಸ್ವೀಕರಿದ ನಾಲ್ಕೇ ದಿನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ.
ಮಧ್ಯಾಹ್ನ ಮುಂಬಯಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಸ್ಪಷ್ಟಪಡಿಸಿದ್ದು, ಚುನಾವಣೆಯಲ್ಲಿ ಬಿಜೆಪಿಗೆ ಜನಾದೇಶ ಸಿಕ್ಕಿದೆ. ನಮ್ಮ ಮತ್ತು ಶಿವಸೇನೆ ಮೈತ್ರಿಗೆ ಸ್ಪಷ್ಟ ಬಹುಮತ ಸಿಕ್ಕಿದೆ. ನಾವೇನು ಶಿವಸೇನೆಗೆ ಮುಖ್ಯಮಂತ್ರಿ ಹುದ್ದೆಯ ಭರವಸೆ ಕೊಟ್ಟಿರಲ್ಲ. ಆದರೆ, ಶಿವಸೇನೆಯು ಚುನಾವಣಾ ಫಲಿತಾಂಶದ ನಂತರ ಚೌಕಾಸಿ ಮಾಡಲು ಆರಂಭಿಸಿತು. ನಮ್ಮ ಬಳಿ ಸರ್ಕಾರ ರಚನೆಗೆ ಬಹುಮತವಿಲ್ಲ, ಹೀಗಾಗಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ದೇವೇಂದ್ರ ಫಡ್ನಾವೀಸ್ ಘೋಷಿಸಿದರು.
Devendra Fadnavis resigns as the Chief Minister of #Maharashtra. pic.twitter.com/45ysg3CMx3
— ANI (@ANI) November 26, 2019
ನವೆಂಬರ್ 27, ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಲು ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನೆಲೆ, ತಮ್ಮ ಬಳಿ ಬಹುಮತ ಇಲ್ಲದ ಕಾರಣ ಬಿಜೆಪಿ ಸದನದಲ್ಲಿ ಮುಖಭಂಗವನ್ನು ಅನುಭವದಿಂದ ಪಾರಾಗುವ ನಿಟ್ಟಿನಲ್ಲಿ ದೇವೇಂದ್ರ ಫಡ್ನವಿಸ್ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/11/15THNSM1FADNAVISPC.gif)