‘ಮಹಾ’ ರಾಜಕೀಯ : NCP ಯಿಂದ ಅಜಿತ್ ಪವಾರ್‌ ವಜಾ!!

ಮುಂಬೈ : 

      ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರಕ್ಕೆ ಬೆಂಬಲ ನೀಡಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಅಜಿತ್ ಪವಾರ್‌ರನ್ನು ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಎನ್‌ಸಿಪಿ ವರಿಷ್ಠ ಶರದ್ ಪವಾರ್ ವಜಾಗೊಳಿಸಿದ್ದಾರೆ.

      ಬಿಜೆಪಿ ಎನ್ ಸಿಪಿ ಮೈತ್ರಿ ಮಾಡಿಕೊಂಡಿದ್ದು , ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪದಗ್ರಹಣ ಸ್ವೀಕರಿಸಿದರೆ, ಎನ್ ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಹಾರಾಷ್ಟ್ರ : ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಸರ್ಕಾರ ರಚನೆ!!!

     ಇದೀಗ ಎನ್ ಸಿಪಿ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಅಜಿತ್ ಪವಾರ್ ಅವರನ್ನು ವಜಾಗೊಳಿಸಿ ಶರದ್ ಪವಾರ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಅಜಿತ್ ಪವಾರ್ ಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿಗೆ ಬೆಂಬಲ ನೀಡಿರುವ ಅಜಿತ್ ಪವಾರ್ ಅವರ ನಡೆ ಖಂಡನೀಯ ಹೀಗಾಗಿ ಅವರನ್ನು ಎನ್ ಸಿಪಿ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ವಜಾಗೊಳಿಸಿದೆ ಎಂದು ಶರದ್ ಪವಾರ್ ಆದೇಶ ಹೊರಡಿಸಿದ್ದಾರೆ.

      ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಸರ್ಕಾರ ರಚನೆಗೆ ತೀವ್ರ ಕಸರತ್ತು ನಡೆದಿತ್ತು. ಆದರೆ ಅಂತಿಮ ಕ್ಷಣದಲ್ಲಿ ಎನ್ ಸಿಪಿ ಬಿಜೆಪಿಗೆ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link