ಕೇರಳ :
ಪವಿತ್ರ ಯಾತ್ರಾಸ್ಥಳ ಶಬರಿಮಲೆಯಲ್ಲಿ ಇನ್ಮು ಮುಂದೆ ಭಕ್ತರು ಮೊಬೈಲ್ ಬಳಕೆಗೆ ನಿಷೇಧ ಹೇರಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.
ಈ ಹಿಂದೆಯೇ ಶಬರಿಮಲೆ ಆವರಣದಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಲಾಗಿತ್ತಾದರೂ ಅದರ ಪರಿಣಾಮಕಾರಿ ಜಾರಿ ಸಾಧ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿರುವ ಅಯ್ಯಪ್ಪ ಸ್ವಾಮಿ ದೇಗುಲ ಆಡಳಿತ ಮಂಡಳಿ ಮೊಬೈಲ್ ಬಳಕೆಯನ್ನು ತಡೆಯಲು ಪರಿಣಾಮಕಾರಿ ಕಾನೂನು ಜಾರಿಗೊಳಿಸುವುದಾಗಿ ಹೇಳಿದೆ.
ಈ ಬಗ್ಗೆ ಕೇರಳ ಹೈಕೋರ್ಟ್ ದೇಗುಲದ ಆಡಳಿತಕ್ಕೆ ಮಾಹಿತಿ ನೀಡಿದ್ದು, ದೇವಾಲಯದ ಆವರಣದಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್ ಬಳಕೆ, ಫೋಟೋ ತೆಗೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
