ದೆಹಲಿ:
‘ನಾನು ರಾಜಕೀಯಕ್ಕೆ ಸೇರಿದರೆ ನನ್ನ ಹೆಂಡತಿ ನನ್ನನ್ನು ಬಿಟ್ಟು ಹೋಗುತ್ತಾಳೆ..’ ಎಂದು ಆರ್ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್ ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಪ್ರಮುಖ ಆಂಗ್ಲ ಪತ್ರಿಕೆಯೊಂದಕ್ಕೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಅವರು ರಾಜಕೀಯ ಮತ್ತು ರಾಜಕೀಯ ಪಕ್ಷಗಳ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ರಾಜಕೀಯ ಎಲ್ಲಾ ಕಡೆಯೂ ಒಂದೇ ರೀತಿಯಲ್ಲಿದೆ. ರಾಜಕೀಯದಲ್ಲಿ ಗದ್ದಲ ಹೆಚ್ಚು. ಆದರೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಬೇರೆಯವರು ಭಾಷಣ ಮಾಡಿ ಮತಗಳನ್ನು ಗಳಿಸಬಹುದು. ಆದರೆ, ಅದು ನನಗೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ತುಂಬ ಅಸಹನೀಯ ಭಾವ ಮನೆ ಮಾಡಿದ್ದು, ಈ ಕ್ಷೇತ್ರಕ್ಕೆ ಕಾಲಿಟ್ಟರೆ ನನ್ನ ಪತ್ನಿ ನನ್ನನ್ನು ಬಿಟ್ಟು ಹೊಗುವುದಾಗಿ ಬೆದರಿಕೆ ಹಾಕಿರುವುದಾಗಿ ರಘುರಾಮ್ ರಾಜನ್ ಹೇಳಿದ್ದಾರೆ.
ಒಂದು ವೇಳೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಘುರಾಮ್ ರಾಜನ್ ಸಚಿವರಾಗಲಿದ್ದಾರೆ ಎಂಬುದು ಕೇವಲ ಊಹಾಪೋಹ ಎಂದು ಅವರು ಸ್ಪಷ್ಟವಾಗಿ ತಳ್ಳಿ ಹಾಕಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ