ಛತ್ತೀಸ್ಗಢ :
ರಸ್ತೆ ಕಾಮಗಾರಿ ನಡೆಸುತ್ತಿದ್ದ ವಾಹನಗಳು ಮತ್ತು ಯಂತ್ರಗಳಿಗೆ ನಕ್ಸಲರು ಬೆಂಕಿಯಿಟ್ಟಿರುವ ಘಟನೆ ಛತ್ತೀಸಗಢ ಬಿಜಾಪುರ್ ಜಿಲ್ಲೆಯಲ್ಲಿ ನಡೆದಿದೆ.
ಛತ್ತೀಸ್ಗಢದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದು, ಘಟನೆಯಲ್ಲಿ ಕಾಮಗಾರಿ ನಡೆಸುತ್ತಿದ್ದ ಗುತ್ತಿಗೆದಾರನನ್ನು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದ್ದು, ಇನ್ನೂ ಅಧಿಕೃತ ಮಾಹಿತಿ ದೊರೆತಿಲ್ಲ. ಬಿಜಾಪುರ್ ಜಿಲ್ಲೆಯ ತುಮ್ನಾರ್ ಮತ್ತು ಕೊಯಿಟ್ಪಾಲ್ ಗ್ರಾಮದ ನಡುವೆ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ರಸ್ತೆ ಕಾಮಗಾರಿ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
