ದೆಹಲಿ :
ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ಈಗಾಗಲೇ ತಯಾರಿ ಶುರುವಾಗಿದ್ದು, ನಿರ್ಭಯಾ ಅತ್ಯಾಚಾರಿಗಳಿಗೆ ಇಂದು ಕೊನೆ ರಾತ್ರಿ.
ಹೌದು, ನಿರ್ಭಯಾ ಆರೋಪಿಗಳನ್ನು ಗಲ್ಲಿಗೇರಿಸಲು ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ ಬೆಳಿಗ್ಗೆ 6 ಗಂಟೆಗೆ ನಾಲ್ವರು ಅಪರಾಧಿಗಳು ಗಲ್ಲಿಗೇರಲಿದ್ದಾರೆ.
ಸುಪ್ರೀಂ ಕೋರ್ಟ್ ಪವನ್ ಗುಪ್ತಾ ಕ್ಷಮಾಪಣಾ ಅರ್ಜಿ ವಜಾ ಮಾಡ್ತಿದ್ದಂತೆ ಪಟಿಯಾಲಾ ಹೌಸ್ ಕೋರ್ಟ್ ಪವನ್ ಮತ್ತು ಅಕ್ಷಯ್ ಅರ್ಜಿಯನ್ನು ವಜಾಗೊಳಿಸಿದೆ. ಇಬ್ಬರು, ಮಾರ್ಚ್ 3ರಂದು ನಡೆಯುವ ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಮನವಿ ಸಲ್ಲಿಸಿದ್ದರು. ಈ ಕುರಿತು ಇಂದು ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಜಾಗೊಳಿಸಿದ್ದು, ಗಲ್ಲು ಶಿಕ್ಷೆಯನ್ನು ಮಾರ್ಚ್ 3ಕ್ಕೆ ನಿಗದಿ ಮಾಡುವ ಮೂಲಕ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ದೋಷಿಗಳ ಮತ್ತೊಂದು ಪ್ರಯತ್ನವನ್ನು ಸುಪ್ರೀಂಕೋರ್ಟ್ ವಿಫಲಗೊಳಿಸಿದೆ.
ನಾಲ್ವರು ನಾಳೆ ಗಲ್ಲಿಗೇರುವ ಕಾರಣ ಜೈಲಧಿಕಾರಿಗಳು ತಮ್ಮ ಕೆಲಸ ಶುರು ಮಾಡಿದ್ದಾರೆ. ಅಪರಾಧಿಗಳ ಆರೋಗ್ಯ ತಪಾಸಣೆ ಸೇರಿದಂತೆ ಅನೇಕ ಕೆಲಸಗಳನ್ನು ಮುಗಿಸಬೇಕಿದೆ.
ಈ ಹಿಂದೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ಅನ್ವಯ ಎಲ್ಲವೂ ಅಂದುಕೊಂಡಂತೆ ನಡೆದರೆ ನಾಳೆ ಮುಂಜಾನೆ ಎಲ್ಲ ನಾಲ್ವರು ಹತ್ಯಾಚಾರಿಗಳಿಗೆ ನೇಣು ಶಿಕ್ಷೆಯಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ