ನವದೆಹಲಿ:
ಕಾಶ್ಮೀರವು ಭಾರತದ ಆಂತರಿಕ ವಿಷಯ. ಯಾವುದೇ ದೇಶಕ್ಕೂ ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅವಕಾಶವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಜಮ್ಮು- ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದೆ. ‘ಅನೇಕ ವಿಷಯಗಳಲ್ಲಿ ಈ ಸರ್ಕಾರವನ್ನು ನಾನು ಒಪ್ಪುವುದಿಲ್ಲ. ಆದರೆ ಈ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟ. ಕಾಶ್ಮೀರವು ಭಾರತದ ಆಂತರಿಕ ವಿಷಯ. ಪಾಕಿಸ್ತಾನವೂ ಸೇರಿದಂತೆ ಇತರ ಯಾವುದೇ ದೇಶಕ್ಕೂ ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅವಕಾಶವಿಲ್ಲ’ ಎಂದು ಉಲ್ಲೇಖಿಸಿದ್ದಾರೆ.
I disagree with this Govt. on many issues. But, let me make this absolutely clear: Kashmir is India’s internal issue & there is no room for Pakistan or any other foreign country to interfere in it.
— Rahul Gandhi (@RahulGandhi) August 28, 2019
ಪಾಕಿಸ್ತಾನ ವಿಶ್ವದಾದ್ಯಂತ ಉಗ್ರವಾದವನ್ನು ಪ್ರಚೋದಿಸುತ್ತಿರುವುದು ಎಲ್ಲರಿಗೂ ತಿಳಿದಿದೆ. ಈ ಬಗ್ಗೆ ನಾನು ಸ್ಪಷ್ಟನೆ ನೀಡಿದ್ದೇನೆ. ಕಾಶ್ಮೀರ ಭಾರತದ ಆಂತರಿಕ ವಿಷಯ ಮತ್ತು ಇಲ್ಲಿ ಪಾಕಿಸ್ತಾನ ಅಥವಾ ಬೇರೆ ಇತೆರೆ ದೇಶಗಳು ಮೂಗು ತೂರಿಸಲು ಅವಕಾಶವಿಲ್ಲ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.
There is violence in Jammu & Kashmir. There is violence because it is instigated and supported by Pakistan which is known to be the prime supporter of terrorism across the world.
— Rahul Gandhi (@RahulGandhi) August 28, 2019
ಕಾಶ್ಮೀರ ಕಣಿವೆಗೆ ಭೇಟಿ ನೀಡಲು ವಿಫಲ ಯತ್ನ ನಡೆಸಿದ ಬಳಿಕ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.