ವಾರಣಾಸಿ:
ವಾರಾಣಸಿಯಲ್ಲಿ ಪ್ರಧಾನಮಂತ್ರಿ ನರೇಂಂದ್ರ ಮೋದಿ ವಿರುದ್ಧ ಕಣಕ್ಕಿಳಿದಿದ್ದ ಸಮಾಜವಾದಿ ಪಕ್ಷದ ಅಭ್ಯರ್ಥಿ, ಮಾಜಿ ಯೋಧ ತೇಜ್ ಬಹದ್ದೂರ್ ನಾಮಪತ್ರ ತಾಂತ್ರಿಕ ಕಾರಣಗಳಿಂದ ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕೃತಗೊಂಡಿದೆ.
ಶಾಲಿನಿ ಯಾದವ್ ಅವರನ್ನು ಸಮಾಜವಾದಿ ಪಕ್ಷ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ತೇಜ್ ಬಹದ್ದೂರ್ ನನ್ನು ತೇಜ್ ಬಹದ್ದೂರ್ ಯಾದವ್ ಅವರೇ ನಮ್ಮ ಅಭ್ಯರ್ಥಿ ಎಂದು ಸಮಾಜವಾದಿ ಪಕ್ಷ ಅಂತಿಮಗೊಳಿಸಿತ್ತು.
ಹರಿಯಾಣದ ರೇವಾರಿ ಮೂಲದ ತೇಜ್ ಬಹದ್ದೂರ್ ಯಾದವ್ ಕಳೆದ ಕೆಲವು ವರ್ಷಗಳ ಹಿಂದೆ ಮಾಡಿದ್ದ ವೀಡಿಯೋ ಭಾರಿ ವೈರಲ್ ಆಗಿತ್ತು. ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ತೇಜ್ ಬಹದ್ದೂರ್ ವೀಡಿಯೋ ಮಾಡಿದ್ದು ಭಾರಿ ವೈರಲ್ ಆಗಿತ್ತು. ನಂತರ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು. ಇದೀಗ ತೇಜ್ ಬಹದ್ದೂರ್ ನಾಮಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/05/modi-tej_20190488118.gif)